ಏರ್’ಪೋರ್ಟ್’ನಲ್ಲೇ ಬಿಜೆಪಿಯಿಂದ ರಾಜಕೀಯ ಸಭೆ; ತನಿಖೆಗೆ ಕಾಂಗ್ರೆಸ್ ಆಗ್ರಹ

Published : Jul 02, 2017, 12:14 PM ISTUpdated : Apr 11, 2018, 01:04 PM IST
ಏರ್’ಪೋರ್ಟ್’ನಲ್ಲೇ ಬಿಜೆಪಿಯಿಂದ ರಾಜಕೀಯ ಸಭೆ; ತನಿಖೆಗೆ ಕಾಂಗ್ರೆಸ್ ಆಗ್ರಹ

ಸಾರಾಂಶ

ಗೋವಾ ವಿಮಾನ ನಿಲ್ದಾಣದಲ್ಲೇ ರಾಜಕೀಯ ಸಭೆಯನ್ನು ಹಮ್ಮಿಕೊಂಡ ಬಿಜೆಪಿಯ ನಡೆಯು ವಿವಾದವನ್ನು ಸೃಷ್ಟಿಸಿದೆ.  ಬಿಜೆಪಿಯು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಕಾಂಗ್ರೆಸ್ ಟೀಕಿಸಿದೆ.

ಪಣಜಿ: ಗೋವಾ ವಿಮಾನ ನಿಲ್ದಾಣದಲ್ಲೇ ರಾಜಕೀಯ ಸಭೆಯನ್ನು ಹಮ್ಮಿಕೊಂಡ ಬಿಜೆಪಿಯ ನಡೆಯು ವಿವಾದವನ್ನು ಸೃಷ್ಟಿಸಿದೆ.  ಬಿಜೆಪಿಯು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಕಾಂಗ್ರೆಸ್ ಟೀಕಿಸಿದೆ.

ನಿನ್ನೆ ಗೋವಾದ ಡಾಬೋಲಿಮ್ ವಿಮಾನ ನಿಲ್ದಾಣ ಕಾಂಪ್ಲೆಕ್ಸ್’ನಲ್ಲೇ  ಬಿಜೆಪಿಯು  ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು  ಸ್ವಾಗತಿಸಲು ರಾಜಕೀಯ ಸಭೆಯನ್ನು ಆಯೋಜಿಸಿತ್ತು ಹಾಗೂ ಅದಕ್ಕಾಗಿಯೇ ವೇದಿಕೆಯಾದಿಗಳನ್ನು ವ್ಯವಸ್ಥೆಗೊಳಿಸಿತ್ತು. 

ಕಾರ್ಯಕ್ರಮದಲ್ಲಿ ಅಮಿತ್ ಶಾ, ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸೇರಿದಂತೆ ಇನ್ನಿತರ ಸಚಿವರು ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.

ಬಿಜೆಪಿಯು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅಧಿಕಾರದ ಮದದಲ್ಲಿ ಸರಿಯಾಗಿ ಆಡಳಿತ ನಡೆಸುವ ಪರಿಜ್ಞಾನವನ್ನು ಕಳೆದುಕೊಂಡಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!