ಇ. ಅಹಮದ್ ಸಾವಿನ ಕುರಿತು ತನಿಖೆಗೆ ಕಾಂಗ್ರೆಸ್ ಆಗ್ರಹ

Published : Feb 03, 2017, 12:22 PM ISTUpdated : Apr 11, 2018, 12:40 PM IST
ಇ. ಅಹಮದ್ ಸಾವಿನ ಕುರಿತು ತನಿಖೆಗೆ ಕಾಂಗ್ರೆಸ್ ಆಗ್ರಹ

ಸಾರಾಂಶ

ಸರ್ಕಾರ ತನ್ನ ಅಮಾನವೀಯ ನಡೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಹಾಗೂ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ (ಫೆ.03): ಮುಸ್ಲಿಮ್ ಲೀಗ್ ನೇತಾರ ಹಾಗೂ ಸಂಸದ ಇ.ಅಹಮದ್ ಅವರ ಸಾವನ್ನು ಸಂಸದೀಯ ಸಮಿತಿಯಿಂದ ತನಿಖೆಗೊಳಪಡಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಫೆ.1ರಂದೇ ಬಜೆಟನ್ನು ಮಂಡಿಸುವ ಸಲುವಾಗಿ ಅಹಮದ್ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಗುಪ್ತವಾಗಿರಿಸಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಸರ್ಕಾರ ತನ್ನ ಅಮಾನವೀಯ ನಡೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಹಾಗೂ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇ. ಅಹಮದ್ ಸಂಸತ್ತಿನಲ್ಲಿ ಕುಸಿದು ಬಿದ್ದ ಬಳಿಕ ಆಸ್ಪತ್ರೆಗೆ ದಾಖಲಿಸಲಾದರೂ, ಅವರ ಆರೋಗ್ಯದ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ಏಕೆ ಕೊಟ್ಟಿಲ್ಲವೆಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಂಗಳವಾರದಂದು ರಾಷ್ಟ್ರಪತಿ ಭಾಷಣದ ಸಂದರ್ಭದಲ್ಲಿ ಇ, ಅಹಮದ್ ಅವರಿಗೆ ಸಂಸತ್ತಿನಲ್ಲೇ ಹೃದಯಾಘಾತವಾಗಿದ್ದು, ಅಂದು ಮಧ್ಯರಾತ್ರಿ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅಹಮದ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಆಸ್ಪತ್ರೆ ಅಡಳಿತ ಮಂಡಳಿಯು ಕುಟುಂಬಸ್ಥರು ಸೇರಿದಂತೆ ಯಾರಿಗೂ ಅಹಮದ್ ಅವರನ್ನು ನೋಡಲು ಅನುಮತಿ ನೀಡಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!