
ಜೈಪುರ[ನ.18]: ಡಿಸೆಂಬರ್ 7ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ ರಂಗೇರತೊಡಗಿದ್ದು, ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಸ್ಪರ್ಧಿಸುತ್ತಿರುವ ಝಾಲಾರ್ಪಟಾನ್ ಕ್ಷೇತ್ರದಿಂದ ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಹಾಗೂ ಮಾಜಿ ಬಿಜೆಪಿ ಶಾಸಕ ಮಾನವೇಂದ್ರ ಸಿಂಗ್ ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿದ 2ನೇ ಪಟ್ಟಿಯಲ್ಲಿ ಜಸ್ವಂತ್ ಪುತ್ರನ ಹೆಸರಿದ್ದು, ಮುಖ್ಯಮಂತ್ರಿ ವಿರುದ್ಧ ಅವರು ಸ್ಪರ್ಧಿಸುತ್ತಿರುವ ಕಾರಣ ಸಹಜವಾಗೇ ಭಾರೀ ಕುತೂಹಲ ಮೂಡಿದೆ. ಈಗಾಗಲೇ ಕಾಂಗ್ರೆಸ್ನಿಂದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ಸಿ.ಪಿ. ಜೋಶಿ ಹಾಗೂ ಗಿರಿಜಾ ವ್ಯಾಸ್ರಂಥ ಘಟಾನುಘಟಿಗಳೂ ಸ್ಪರ್ಧಿಸುತ್ತಿದ್ದಾರೆ.
ರಾಜೇ ವ್ಯಂಗ್ಯ: ಬೇರೆ ಯಾವ ಅಭ್ಯರ್ಥಿಯೂ ಸಿಗದ ಕಾರಣ ಮಾನವೇಂದ್ರ ಅವರನ್ನು ನಿಲ್ಲಿಸಿ, ಅವರನ್ನು ಕಾಂಗ್ರೆಸ್ ಬಲಿಪಶು ಮಾಡುತ್ತಿದೆ ಎಂದು ವಸುಂಧರಾ ರಾಜೇ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.