
ಬೆಂಗಳೂರು (ನ.02): ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ‘ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ’ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಕೂಡಾ ಸಿದ್ಧತೆ ನಡೆಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ‘ಜನ ಆಶೀರ್ವಾದ ಯಾತ್ರೆ'ಗೆ ಸಿದ್ಧತೆ ಸಿಎಂ ತೀರ್ಮಾನಿಸಿದ್ದಾರೆ. ಡಿ.15ರಿಂದ ಜ.15ರವರೆಗೆ "ಜನ ಆಶೀರ್ವಾದ ಯಾತ್ರೆ" ಬೀದರ್ ಜಿಲ್ಲೆಯಿಂದ ಚಾಮರಾಜಪೇಟೆಯವರೆಗೆ ನಡೆಯಲಿದೆ. ಹೈಟೆಕ್ ಬಸ್ ಮೂಲಕ ಯಾತ್ರೆಗೆ ಹೊರಡಲು ಸಿಎಂ ತೀರ್ಮಾನಿಸಿದ್ದರು. ಆದರೆ ಬಸ್ ಬದಲು ಟೆಂಪೋ ಮೂಲಕ ಯಾತ್ರೆಗೆ ತೆರಳಲು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.