
ಸುವರ್ಣ ವಿಧಾನಸೌಧ: ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಯಾವುದೇ ಒತ್ತಡ ಇಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ಕೆಲವರನ್ನು ಸಂಪುಟದಿಂದ ಕೈಬಿಟ್ಟರೆ ಏನು ಮಾಡುವುದಕ್ಕೆ ಆಗುತ್ತದೆ? ಈ ಬಗ್ಗೆ ತಲೆಕೆಡಿಸಿಕೊಳ್ಳುವುದು ಏನಿಲ್ಲ.
ಸಂಪುಟದಲ್ಲಿ ಹೊಸ ರಕ್ತ, ಹಳೆಯ ರಕ್ತ ಎರಡೂ ಇರಲಿ ಬಿಡಿ. ಇದು ಒಳ್ಳೆಯ ಬೆಳವಣಿಗೆ ಎಂದರು. ಜೆಡಿಎಸ್ನವರು ಕಾಂಗ್ರೆಸ್ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.