
ನವದೆಹಲಿ (ಜ.18): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷ ಇಂದು ‘ಜನ-ವೇದನೆ’ ಪ್ರತಿಭಟನಾ ಅಭಿಯಾನಕ್ಕೆ ಚಾಲನೆ ನೀಡಿದೆ.
ವಿವಿಧ ರಾಜ್ಯಗಳಲ್ಲಿರುವ ರಿಸರ್ವ್ ಬ್ಯಾಂಕ್ ಕಚೇರಿಯನ್ನು ಘೆರಾವ್ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನೋಟು ಅಮಾನ್ಯ ಕ್ರಮ ಬಳಿಕ ಹೇರಲಾಗಿರುವ ವಿತ್’ಡ್ರಾವಲ್ ಮಿತಿಯನ್ನು ಹಿಂಪಡೆಯಬೇಕು ಹಾಗೂ ನಗದು-ರಹಿತ ವ್ಯವಹಾರಗಳಿಗೆ ಶುಲ್ಕವನ್ನು ವಿಧಿಸಭಾರದೆಂದು ಕಾಂಗ್ರೆಸ್ ಪಕ್ಷವು ಸರ್ಕಾರವನ್ನು ಆಗ್ರಹಿಸಿದೆ.
ಪ್ರತಿಭಟನಾ ನಿರತ ಸುಶೀಲ್ ಕುಮಾರ್ ಶಿಂಧೆ, ಶಂಕರ್ ಸಿಂಗ್ ವಾಘೆಲಾ ಮುಂತಾದ ಕಾಂಗ್ರೆಸ್ ನಾಯಕರನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಗಪುರದಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದ್ದರಿಂದ ಪರಿಸ್ಥಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.