ಸರ್ಕಾರ ಪತನಕ್ಕೆ ಕಾಂಗ್ರೆಸ್‌ ನಾಯಕರು ಕಾರಣ: ಪ್ರಜ್ವಲ್‌ ರೇವಣ್ಣ

Published : Jul 30, 2019, 07:21 AM IST
ಸರ್ಕಾರ ಪತನಕ್ಕೆ ಕಾಂಗ್ರೆಸ್‌ ನಾಯಕರು ಕಾರಣ: ಪ್ರಜ್ವಲ್‌ ರೇವಣ್ಣ

ಸಾರಾಂಶ

ಕಾಂಗ್ರೆಸ್‌ನಲ್ಲಿ ಕೆಲವರು ಮಂತ್ರಿಯಾಗುವ ಬಯಕೆಯಲ್ಲಿ ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ| ಸರ್ಕಾರ ಪತನಕ್ಕೆ ಕಾಂಗ್ರೆಸ್‌ ನಾಯಕರು ಕಾರಣ: ಪ್ರಜ್ವಲ್‌| 

ಹಾಸನ[ಜು.30]: ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ಸಿಗರೇ ಕಾರಣ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಕೆಲವರು ಮಂತ್ರಿಯಾಗುವ ಬಯಕೆಯಲ್ಲಿ ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಸರ್ಕಾರ ಪತನಕ್ಕೆ ನಮ್ಮ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಹೊಣೆಯಾಗಿಸಲಾಗುತ್ತಿದೆ ಎಂದು ದೂರಿದರು.

ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಸರ್ಕಾರದ ಪತನಕ್ಕೆ ನಮ್ಮ ತಂದೆಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆದರೆ, ಸರ್ಕಾರ ಕೆಡವಿದ್ದು ಮಾತ್ರ ಕಾಂಗ್ರೆಸ್ಸಿಗರು. ಕೆಲವರು ವೈಯಕ್ತಿಕ ಕಾರಣಕ್ಕಾಗಿ ಸರ್ಕಾರ ಬೀಳಿಸಿದ್ದಾರೆ ಎಂದು ಪುನರುಚ್ಚರಿಸಿದರು. ಬಿ.ಎಸ್‌.ಯಡಿಯೂರಪ್ಪ ನೇತೃತ್ವ ಬಿಜೆಪಿ ಸರ್ಕಾರ ಅಲ್ಪಾಯುಷಿ ಎಂಬುದು ಮಾತ್ರ ನಿಜ. ಆದರೆ, ಎಷ್ಟುದಿನ ಇರುತ್ತದೆ ಎಂದು ಭವಿಷ್ಯ ಹೇಳಲು ತಾವು ಜ್ಯೋತಿಷಿಯಲ್ಲ ಎಂದು ಹೇಳಿದರು.

ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಕೆಲವು ಶಾಸಕರು ಹೇಳಿರಬಹುದು. ಅದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ, ಸರ್ಕಾರಕ್ಕೆ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದರು.

ನೋಟಿಸ್‌ ಬಂದಿಲ್ಲ:

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸುಳ್ಳು ಪ್ರಮಾಣಪತ್ರ ಸಲ್ಲಿದ್ದೇನೆ ಎಂಬ ಆರೋಪದ ಕುರಿತು ಇದುವರೆಗೂ ಯಾವುದೇ ನೋಟಿಸ್‌ ಬಂದಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ