ಇನ್ನೊಂದು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನ: ಸದಾನಂದ ಗೌಡ

Published : Aug 28, 2018, 12:33 PM ISTUpdated : Sep 09, 2018, 10:19 PM IST
ಇನ್ನೊಂದು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನ: ಸದಾನಂದ ಗೌಡ

ಸಾರಾಂಶ

ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆಯೇ ಹೊರತು ಈ ಸರ್ಕಾರಕ್ಕೆ ಬೇರೆ ಉದ್ದೇಶವಿಲ್ಲ. ಜೆಡಿಎಸ್, ಕಾಂಗ್ರೆಸ್ಸಿಗರು ಅಧಿಕಾರಕ್ಕಾಗಿ ಹಾತೊರೆಯುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕಾದರೂ ಅವರಿಗೆ ಜೆಡಿಎಸ್ ಬೆಂಬಲ ಬೇಕು. ಆದರೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ದೇವೇಗೌಡರು ಒಂದಾಗಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಮಂಗಳೂರು[ಆ.28]: ಇನ್ನೊಂದು ತಿಂಗಳಲ್ಲಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆಯೇ ಹೊರತು ಈ ಸರ್ಕಾರಕ್ಕೆ ಬೇರೆ ಉದ್ದೇಶವಿಲ್ಲ. ಜೆಡಿಎಸ್, ಕಾಂಗ್ರೆಸ್ಸಿಗರು ಅಧಿಕಾರಕ್ಕಾಗಿ ಹಾತೊರೆಯುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕಾದರೂ ಅವರಿಗೆ ಜೆಡಿಎಸ್ ಬೆಂಬಲ ಬೇಕು. ಆದರೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ದೇವೇಗೌಡರು ಒಂದಾಗಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಹೈಕಮಾಂಡ್ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಅವಕಾಶಕೊಟ್ಟಿದ್ದಾರೆ. ಆದರೆ ಒಪ್ಪಿಗೆ ಕೊಡುವ ಮುನ್ನ ಸರ್ಕಾರ ಉರುಳಿಸೋದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರಿಂದಲೇ ಸರ್ಕಾರ ಉರುಳುತ್ತದೆ. ಇದಕ್ಕಾಗಿ ಬಿಜೆಪಿ ಏನೂ ಮಾಡಬೇಕಾಗಿಲ್ಲ ಎಂದು ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!