
ಬೆಂಗಳೂರು : ಪ್ರಮುಖ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಅಂಗ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಇಂದು ದೆಹಲಿಯಲ್ಲಿ ಶಮನ ಗೊಳ್ಳುತ್ತದೆ ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ.
ಪ್ರಮುಖ ಖಾತೆಗಳಿಗಾಗಿ ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿರುವ ಬಗ್ಗೆ ಜೆಡಿಎಸ್ ವರಿಷ್ಠ ನಾಯಕ ಎಚ್. ಡಿ.ದೇವೇಗೌಡ ಅವರು ಬೇಸರಗೊಂಡಿದ್ದಾರೆ.
ಮುಖ್ಯಮಂತ್ರಿ ಖಾತೆ ಯನ್ನು ನಾವು ಉಳಿಸಿ ಕೊಂಡರೂ ಸಚಿವ ಸ್ಥಾನಗಳ ಪೈಕಿ ಸಿಂಹ ಪಾಲನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದೇವೆ. ಇದೀಗ ಎಲ್ಲ ಪ್ರಮುಖ ಖಾತೆಗಳೂ ತಮಗೆ ಬೇಕು ಎಂದರೆ ಹೇಗೆ? ಇದರಿಂದ ಮೈತ್ರಿಧರ್ಮ ಪಾಲನೆ ಆದಂತಾಗುವುದಿಲ್ಲ ಎಂದು ಗೌಡರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.