ಜಾರಕಿಹೊಳಿ ಪಕ್ಷ ಬಿಡುವುದು ಸುಳ್ಳು : ಕೈ ಮುಖಂಡ

Published : Apr 24, 2019, 03:19 PM IST
ಜಾರಕಿಹೊಳಿ ಪಕ್ಷ ಬಿಡುವುದು ಸುಳ್ಳು : ಕೈ ಮುಖಂಡ

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಮಹಾ ಸಮರ ಮುಕ್ತಾಯವಾಗಿದೆ. ಇದೇ ವೇಳೆ ರಾಜ್ಯ ರಾಜಕೀಯದಲ್ಲಿ ವಿವಿಧ ರೀತಿಯ ಬೆಳವಣಿಗೆಗಳಾಗುತ್ತಿವೆ. ಸರ್ಕಾರ ಪತನದ ಬಗ್ಗೆ ಹೆಚ್ಚಿನ ಚರ್ಚೆಗಳಾಗುತ್ತಿವೆ. 

ಗದಗ  : ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಸರ್ಕಾರ ಉರುಳಿಸುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಜೋರಾಗಿವೆ. 

ಈ ಬಗ್ಗೆ ಗದಗ್ ನಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರ ಉರುಳಿಸುವ ಪ್ರಕ್ರಿಯೆಯೊಂದು ರಾಜದ್ರೋಹ ಎಂದು ಹೇಳಿದ್ದಾರೆ. 

ಕಲೆವರು ಒಂದೆಡೆ ಎಲ್ಲದಕ್ಕೂ ಅನುಮತಿ ಕೊಟ್ಟು ವಿಶ್ವಾಸ ಮತ ನೀಡುತ್ತೀರಿ. ಹೊರಗೆ ಬಂದು ಸರ್ಕಾರದ ವಿರುದ್ಧ ಮಾತನಾಡುತ್ತಾರೆ.  ಸರ್ಕಾರದ ವಿರುದ್ಧ ಐದಾರು ಜನ ಶಾಸಕರು ಮಾತನಾಡುವುದನ್ನು ಗಮನಿಸುತ್ತಿದ್ದೇವೆ ಎಂದು ಹೇಳಿದರು. 

ಬಿಜೆಪಿ ಮುಖಂಡರಾದ ಬಿ.ಎಸ್.ವೈ ಅಶೋಕ್, ಈಶ್ವರಪ್ಪ ಇವರೆಲ್ಲಾ ಸಂವಿಧಾನಿಕ ಹುದ್ದೆಯಲ್ಲಿದ್ದವರು. ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸರ್ಕಾರ ಕೆಡವುವ ತಂತ್ರ ಮಾಡುವುದೂ ಕೂಡ ಸರಿಯಲ್ಲ ಎಂದರು. 

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಅವರ ಪಕ್ಷ ಬಿಡುವುದಿಲ್ಲ. ಬಿಡುವುದಾದರೆ ಏಳೆಂಟು ತಿಂಗಳ ಹಿಂದೆಯೇ ಬಿಡುತ್ತಿದ್ದರು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಒಂದು ಪದದಿಂದ ಜನರ ಮನಸ್ಸನ್ನು ಬದಲಿಸಿದ Thalapathy Vijay; ಆಡಳಿತದಲ್ಲಿದ್ದ ಪಕ್ಷಕ್ಕೆ ಪೆಟ್ಟು ಕೊಟ್ಟ ನಟ
ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ, ಸನ್ ಟಿವಿ ಷೇರುಗಳು ದಿಢೀರ್ ಕುಸಿತ, ಕಾರಣವಾಗಿದ್ದು ಈ ಪಕ್ಷ!