3ನೇ ದಿನ ED ವಿಚಾರಣೆ ಮುಗಿಸಿಕೊಂಡು ಹೊರ ಬಂದ ಡಿಕೆಶಿ ಖಡಕ್ ಮಾತು

Published : Sep 02, 2019, 09:36 PM IST
3ನೇ ದಿನ ED ವಿಚಾರಣೆ ಮುಗಿಸಿಕೊಂಡು ಹೊರ ಬಂದ ಡಿಕೆಶಿ ಖಡಕ್ ಮಾತು

ಸಾರಾಂಶ

ಇಂದು [ಸೋಮವಾರ] ಮೂರನೇಯ ದಿನ ಇಡಿ ವಿಚಾರಣೆಗೆ ಹೋಗುವ ಮುನ್ನ ಕಣ್ಣೀರಿಟ್ಟ ಮಾಜಿ ಸಚಿವ ಡಿಕೆ ಶಿವಕುಮಾರ್, ರಾತ್ರಿ ಕಚೇರಿಯಿಂದ ಹೊರ ಬಂದು ಖಡಕ್ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಡಿಕೆಶಿ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಮುಂದೆ ಓದಿ.

ನವದೆಹಲಿ, [ಸೆ.02]:  ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್  ಇಂದು [ಸೋಮವಾರ]  3ನೇ ದಿನ ವಿಚಾರಣೆ ಮುಕ್ತಾಯಗೊಂಡಿದೆ.

ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು, ಮತ್ತೆ ನಾಳೆ [ಮಂಗಳವಾರ] ವಿಚಾರಣೆಗ ಹಾಜರಾಗುವಮತೆ ಡಿಕೆಶಿಗೆ ಹೇಳಿ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆಶಿ ನಾಳೆಯೂ ಸಹ ಇಡಿ ಕಚೇರಿಗೆ ಹೋಗಬೇಕಿದೆ.

ಕರಗಿದ ಕನಕಪುರ ಬಂಡೆ; ವಿಷಯವೊಂದು ನೆನೆದು ಕಣ್ಣೀರು ಹಾಕಿದ ಡಿಕೆಶಿ

ಇನ್ನು ಸತತ 8 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಇಡಿ ಕಚೇರಿಯಿಂದ ಹೊರಬಂದ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಖಡಕ್ ಮಾತುಗಳನ್ನಾಡಿದ್ದಾರೆ.  ‘ನಾನು ಯಾರಿಗೂ ಹೆದರಲ್ಲ. ಇಂದು ಹಿರಿಯರ ಪೂಜೆಯಲ್ಲಿ ಭಾಗಿಯಾಗದಿದ್ದಕ್ಕೆ ಬೇಸರ ಅಷ್ಟೇ. ಯಾರ ಅನುಕಂಪ ಗಿಟ್ಟಿಸಲು ನಾನು ಕಣ್ಣೀರು ಹಾಕಿಲ್ಲ. ಯಾರಿಗೂ ಹೆದರುವ ಅವಶ್ಯಕತೆ ಇಲ್ಲ, ಹೆದರೋದು ಇಲ್ಲ. ರಾಜಕಾರಣ ಮಾಡೋದಕ್ಕೆಂದೇ ಬೆಂಗಳೂರಿಗೆ ಬಂದವನು. ನನಗೂ ರಾಜಕಾರಣ ಮಾಡುವುದಕ್ಕೆ ಬರುತ್ತೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಏರು ಧ್ವನಿಯಲ್ಲಿ ಹೇಳಿದರು.

ಇನ್ನು ಅನುಕಂಪ ಗಿಟ್ಟಿಸಿಕೊಳ್ಳಲು ಅತ್ತಿದ್ದಾರೆ ಎನ್ನುವ  ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಸಿದ ಡಿಕೆಶಿ, ನನಗೆ ಅನುಕಂಪ ಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯ ಇಲ್ಲ. ರಾಜಕಾರಣ ಮಾಡಲೇಬೇಕೆಂದು ಬಂದವನು ನಾನು ಎಂದು ಈಗಾಗಲೇ ಹೇಳಿದ್ದೇನೆ. ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ನಾನು ಯಾವುದಕ್ಕೂ ಹೆದರುವ ಮಗನಲ್ಲ ಎಂದು ಗರಂ ಆಗಿಯೇ ತಿರುಗೇಟು ಕೊಟ್ಟರು.

ಡಿಕೆ ಶಿವಕುಮಾರ್ ಕಣ್ಣೀರಿಗೆ ಮಿಡಿದ ಕುಮಾರಸ್ವಾಮಿ ಮನ

ಅಶ್ವಥ್ ನಾರಾಯಣ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ, ಯಶಸ್ವಿಯಾಗಲಿ. ರಾಜಕೀಯ ಬಿಟ್ಟು ಉದ್ಯಮಿಯಾಗಲಿ ಎಂದು ಸಲಹೆ ನೀಡಿದ್ದಾರೆ. ಅಶ್ವಥ್ ನಾರಾಯಣ ಬಹಳ ದೊಡ್ಡವರು, ಅವರ ಸಲಹೆ ಸ್ವೀಕರಿಸುವೆ ವ್ಯಂಗ್ಯವಾಡಿದರು.

ಅಷ್ಟಕ್ಕೂ ಅಶ್ವಥ್ ನಾರಾಯಣ ಹೇಳಿದ್ದೇನು?
ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡ್ತಿದ್ದಾರೆ.  ಕಾನೂನಿನ ಚೌಕಟ್ಟಿನಲ್ಲಿ ಅವರು ಮಾಡಿರುವ ಒಳ್ಳೆಯದು ಕೆಟ್ಟದ್ದು  ಸ್ಕ್ರುಟಿನಿ ಆಗಬೇಕು, ಅದು ಆಗುತ್ತಿದೆ. ಅವರು ಏನು ಮಾಡಿದ್ದಾರೆ? ಏನು ಆಗಿದೆ? ಏನು ಹೋಗಿದೆ? ಎಲ್ಲವೂ ಸಮಾಜಕ್ಕೆ ಗೊತ್ತಿದೆ. ಮಾಡಿರುವ ಕರ್ಮಗಳಿಗೆ ಎಲ್ಲವೂ ಕಾಂಪ್ರಮೈಸ್ ಆದ್ರೆ ಜನ ಎಲ್ಲಿಗೆ ಹೋಗಬೇಕು?  ಈಗ ಅತ್ತು ಕರೆದು ಮಾಡಿದ್ರೆ? ಕಾನೂನಿನ ಅಡಿಯಲ್ಲಿ ಒಳಪಡಬೇಕು. ಅದು ಆಗುತ್ತಿದೆ. ‌ ಉಪ್ಪು ತಿಂದವನು‌ ನೀರು ಕುಡಿಯಲೇಬೇಕು. ಕುಡೀತಾ ಇದ್ದಾನೆ ಎಂದು ಇಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು
ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ