ಕೈಚೆಲ್ಲಿದ ಟ್ರಬಲ್ ಶೂಟರ್, ಶಾಸಕರಿಗೆ ಕರುಣೆ ಬಂದ್ರೆ ಸರ್ಕಾರ ಉಳಿಯುತ್ತೆ!

Published : Jul 14, 2019, 04:11 PM ISTUpdated : Jul 14, 2019, 04:18 PM IST
ಕೈಚೆಲ್ಲಿದ ಟ್ರಬಲ್ ಶೂಟರ್, ಶಾಸಕರಿಗೆ ಕರುಣೆ ಬಂದ್ರೆ ಸರ್ಕಾರ ಉಳಿಯುತ್ತೆ!

ಸಾರಾಂಶ

ದೋಸ್ತಿ ಸರ್ಕಾರ ಉಳಿಸಿಕೊಳ್ಳುವ ಅಂತಿಮ ಹಂತದ ಪ್ಲ್ಯಾನ್ ಗಳು ಕೈ ಕೊಡುತ್ತಿರುವಾಗ ಡಿಕೆ ಶಿವಕುಮಾರ್  ಹೊಸ ವಿಶ್ವಾಸವೊಂದನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಜು.14 )  ರಾಜೀನಾಮೆ ನೀಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮುಂಬೈ ವಿಮಾನ ಏರುವಾಗ ಬಿಜೆಪಿ ನಾಯಕ ಆರ್. ಅಶೋಕ್ ಕಾಣಿಸಿಕೊಂಡಿದ್ದು ದೋಸ್ತಿ ಸರ್ಕಾರದ  ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಕೆರಳಿಸಿದೆ.

ಆರ್.ಅಶೋಕ್ ಮತ್ತು ಬಿಜೆಪಿ ಮೇಲೆ ಎಂಟಿಬಿ ವಾಗ್ದಾಳಿ ಮಾಡಿದ್ದಾರೆ.  ಶಾಸಕರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸ್ನೇಹಿತರು ಎಲ್ಲರಿಗೂ ಕಿವಿ ಮೇಲೆ ಹೂ ಇಡುತ್ತಿದ್ದರು.

ಎಲ್ಲ ಸಮಸ್ಯೆಗಳಿಗೂ ಕಾರಣ ರೇವಣ್ಣ


ನಮಗೂ ಇದಕ್ಕೂ ಸಂಬಂಧವಿಲ್ಲ, ಇದು ಅವರ ಪಕ್ಷದ ಇಂಟರ್ನಲ್ ವಿಚಾರ, ನಾವು ಯಾವುದಕ್ಕೂ ತಲೆ ಹಾಕಲ್ಲ ಅಂತಿದ್ರು. ಹೋಟಲ್, ಬಾಂಬೆ, ಫ್ಲೈಟ್,ದೆಹಲಿ, ಏರ್ ಪೋರ್ಟ್ ಅರೇಂಜ್ ಮೆಂಟ್ ಸೇರಿದಂತೆ ಎಲ್ಲವನ್ನು ಮಾಡಿದ್ದು ಅವರೇ ಎಂದು ಇದೀಗ ಜಗತ್ತಿಗೆ ಗೊತ್ತಾಗಿದೆ ಎಂದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಪ್ರಜಾಪ್ರಭುತ್ವದಲ್ಲಿ ಎಲ್ಲವನ್ನ ಒಪ್ಪಿಕೊಳ್ಳಬೇಕು. ನಾವು ಮಾಡ್ತಿದ್ದೇವೆ, ಈ ಆಪರೇಷನ್ ನಮ್ಮದೆ, ನಮಗೆ ಚೇರ್ ಬೇಕು ಅಂತ ಬಿಜೆಪಿ ನಾಯಕರು ‌ಒಪ್ಪಿಕೊಳ್ಳಬೇಕು. ಪಂಚಾಯ್ತಿಗಳಲ್ಲಿ ನಡೆದಹಾಗೆ ನಾವು ಮಾಡ್ತಿದ್ದೇವೆ ಅಂತ ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದರು.

ನಾವು ಶಾಂತಿಪ್ರಿಯರು ಅಂತ ಬಿಜೆಪಿಯವರು ಇಂತಹ ಕೆಲಸ ಮಾಡಿದ್ದಾರೆ. ಜನರು ಎಲ್ಲವನ್ನು ನೋಡುತ್ತಿದ್ದಾರೆ. ನಮಗೆ ಈಗಲೂ ವಿಶ್ವಾಸವಿದೆ. ವಿಶ್ವಾಸಮತ ಸಂದರ್ಭದಲ್ಲಿ ನಮ್ಮ ಶಾಸಕರು ನಮಗೆ ಬೆಂಬಲ ನೀಡ್ತಾರೆ. ಈಗಾಗ್ಲೆ ಕಾರ್ಯಕರ್ತರು, ಜನರು ಶಾಸಕರಿಗೆ ರಾಜಿನಾಮೆ ನೀಡದಂತೆ ಮನವಿ ಮಾಡ್ತಿದ್ದಾರೆ. ನಮ್ಮ ಶಾಸಕರಿಗೆ ಕರುಣೆ ಬಂದು ನಮ್ಮ ಸರ್ಕಾರ ಉಳಿಸಿಕೊಳ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?