ಸಾಲ ಮನ್ನಾಕ್ಕೆ ಕಾಂಗ್ರೆಸ್‌ ನಾಯಕಿ 1 ಲಕ್ಷ ದೇಣಿಗೆ

Published : Jul 03, 2018, 07:32 AM IST
ಸಾಲ ಮನ್ನಾಕ್ಕೆ ಕಾಂಗ್ರೆಸ್‌  ನಾಯಕಿ 1 ಲಕ್ಷ ದೇಣಿಗೆ

ಸಾರಾಂಶ

ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟದಲ್ಲಿ ಸಾಲ ಮನ್ನಾ ಸಿಕ್ಕಿ ಒದ್ದಾಡುತ್ತಿದೆ. ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಏತನ್ಮಧ್ಯೆ ಕಾಂಗ್ರೆಸ್ ನಾಯಕಿಯೊಬ್ಬರು 1 ಲಕ್ಷ ದೇಣಿಗೆ ಕೊಡುವುದಾಗಿ ಹೇಳಿದ್ದಾರೆ. 

ಕುಂದಗೋಳ (ಜೂ. 03): ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಜಿಪಂ ಸದಸ್ಯೆ ಜ್ಯೋತಿ ಶಿವಾನಂದ ಬೆಂತೂರ ಅವರು ರೈತರ ಸಾಲ ಮನ್ನಾಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸರ್ಕಾರದಿಂದ ಸಿಕ್ಕ ಗೌರವ ಧನ 3 ಲಕ್ಷ ರು. ನೀಡಿದ್ದಾರೆ.

ಇದರ ಬೆನ್ನಲ್ಲೇ ತಾಲೂಕು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಧೃತಿ ಸಾಲ್ಮನಿ ಸಾಲಮನ್ನಾಕ್ಕಾಗಿ ವೈಯಕ್ತಿಕವಾಗಿ 1 ಲಕ್ಷ ರು. ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದರೆ ಅದು ಸರ್ಕಾರಕ್ಕೆ ಹೊರೆಯಾಗುತ್ತದೆ. ಹೀಗಾಗಿ ಎಲ್ಲರೂ ಸೇರಿ ಸರ್ಕಾರದೊಂದಿಗೆ ಕೈ ಜೋಡಿಸಬೇಕಿದೆ. ಈ ನಿಟ್ಟಿನಲ್ಲಿ ನಾನು ವೈಯಕ್ತಿಕವಾಗಿ ಸರ್ಕಾರಕ್ಕೆ 1 ಲಕ್ಷ ರು. ದೇಣಿಗೆ ನೀಡಲು ನಿರ್ಧರಿಸಿದ್ದು, ಅದನ್ನು ಬುಧವಾರ ಮುಖ್ಯಮಂತ್ರಿಗಳಿಗೆ ನೀಡುತ್ತೇನೆ ಎಂದರು. ಅಲ್ಲದೇ, ಕುಂದಗೋಳ ಎಪಿಎಂಸಿ ನಾಮನಿರ್ದೇಶನ ಸದಸ್ಯಳಾಗಿದ್ದು, ನನಗೆ 4 ವರ್ಷ ಗೌರವಧನ ಬಂದಿದೆ. ಅದನ್ನು ಕೂಡ ರೈತರ ಸಾಲಮನ್ನಾಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳನ್ನು ಕಂಡು ಚರ್ಚಿಸಿ ನೀಡುತ್ತೇನೆ ಎಂದು ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಒಂದು-ಎರಡು ಬಣಗಳೆರಡು..' ಹಾಡಿನ ಮೂಲಕ ಸರ್ಕಾರದ ಕಾಲೆಳೆದ ಅಭಯ್ ಪಾಟೀಲ್
ಎರಡು ತಿಂಗಳು ಇಂಟರ್ನ್‌ಶಿಪ್ ಮಾಡುವವರಿಗೆ 4 ಲಕ್ಷ ಸ್ಟೈಫಂಡ್ ಕೊಡುತ್ತದೆ ಈ ಕಾಲೇಜು