ಮಹತ್ವದ ಹುದ್ದೆ ಮೇಲೆ ಕೈ ಮುಖಂಡ ಎಚ್.ಕೆ ಪಾಟೀಲ್ ಕಣ್ಣು

Published : Oct 04, 2019, 03:18 PM IST
ಮಹತ್ವದ ಹುದ್ದೆ ಮೇಲೆ ಕೈ ಮುಖಂಡ ಎಚ್.ಕೆ ಪಾಟೀಲ್ ಕಣ್ಣು

ಸಾರಾಂಶ

ಮಾಜಿ ಸಚಿವ ಎಚ್.ಕೆ.ಪಾಟೀಲ್ ಇದೀಗ ಮಹತ್ವದ ಹುದ್ದೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ವೇಣುಗೋಪಾಲ್ ಭೇಟಿಗೆ ತೆರಳಿದ್ದಾರೆ. 

ನವದೆಹಲಿ [ಅ.04]: ವಿಧಾನ ಸಭೆಯ ಶಾಸಕಾಂಗ ಪಕ್ಷದ ನಾಯಕರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎಚ್.ಕೆ.ಪಾಟೀಲ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. 

ಈ ವೇಳೆ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ್ ರಾಜ್ಯಕ್ಕೆ ಇನ್ನೂ ಸಿಗದ ಪ್ರವಾಹ ಪರಿಹಾರದ ಬಗ್ಗೆ ಪ್ರಸ್ತಾಪಿಸಿದರು. ಪ್ರವಾಹ ಪರಿಹಾರ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿದ್ದು ನಾಚಿಕೆಗೇಡು. ಜನರ ನೋವಿನ ಜೊತೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಟವಾಡುತ್ತಿದೆ.  ಇದರಿಂದ ಜನರ ಶಾಪ ಅವರಿಗೆ ತಟ್ಟುತ್ತದೆ ಎಂದರು. 

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಯಾಕೆ‌ ಈ ರೀತಿಯಾದ ಅನ್ಯಾಯ ಮಾಡುತ್ತಿದೆ.  ರಾಜ್ಯ ಸರ್ಕಾರ ಪ್ರವಾಹದ ವಿಚಾರದಲ್ಲಿ ನೀಡಿರುವ ವರದಿಯ ಅಂಕಿ ಅಂಶಗಳಲ್ಲಿ ಲೋಪ ಇದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರೆಸಿ ವಿಚಾರಣೆ ಮಾಡಲಿ. ಬೊಕ್ಕಸ ಖಾಲಿಯಾಗಿದ್ದರೆ ಸಾಲ ಮಾಡಿ ಪರಿಹಾರ ನೀಡಲಿ. ಇಲ್ಲವಾದಲ್ಲಿ ಕುರ್ಚಿ ಬಿಡಲಿ ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  
ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ಕೂಡ ಪ್ರವಾಹದಿಂದ ನಲುಗಿದ ರಾಜ್ಯಕ್ಕೆ ಪರಿಹಾರ ತರುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದಿಂದ ನೆರವು ಕೇಳಲು ಹಿಂಜರಿಯುತ್ತಿರುವುದು ದುರಾದೃಷ್ಟಕರ ಎಂದು ಎಚ್.ಕೆ.ಪಾಟೀಲ್ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್