‘ಇಬ್ಬರು ಮಕ್ಕಳು ಸಾಕು’ ಇದು ಕಾಂಗ್ರೆಸ್‌ ಜಾಗೃತಿ ಅಭಿಯಾನ: ಮಾಜಿ ಸಚಿವ

Published : Sep 21, 2019, 10:05 AM IST
‘ಇಬ್ಬರು ಮಕ್ಕಳು ಸಾಕು’ ಇದು ಕಾಂಗ್ರೆಸ್‌ ಜಾಗೃತಿ ಅಭಿಯಾನ: ಮಾಜಿ ಸಚಿವ

ಸಾರಾಂಶ

‘ಇಬ್ಬರು ಮಕ್ಕಳು ಸಾಕು’ ಇದು ಕಾಂಗ್ರೆಸ್‌ ಜಾಗೃತಿ ಅಭಿಯಾನ: ಮಾಜಿ ಸಚಿವ| 2020ರ ವೇಳೆಗೆ ಇದು ಕಡ್ಡಾಯವಾಗಿ ರೂಢಿಸಿಕೊಳ್ಳುವಂತೆ ಪಕ್ಷ ಅಥವಾ ಚುನಾವಣಾ ಆಯೋಗವೇ ಜಾಗೃತಿ 

ನವದೆಹಲಿ[ಸೆ.21]: ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವದ ದಿನ ನೀಡಿದ ಹೇಳಿಕೆಗೆ ಕಾಂಗ್ರೆಸ್‌ ಮುಖಂಡ, ಕೇಂದ್ರದ ಮಾಜಿ ಸಚಿವ ಜಿತಿನ್‌ ಪ್ರಸಾದ್‌ ಪ್ರತಿಕ್ರಿಯಿಸಿ, ಈ ಸಂಬಂಧ ಮೋದಿ ಹೊಸದೇನನ್ನೂ ಹೇಳಿಲ್ಲ. ಕಾಂಗ್ರೆಸ್‌ ಈ ಹಿಂದೆಯೇ ಈ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ನಡೆಸಿತ್ತು ಎಂದಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ ಸೇರಿದಂತೆ ಪ್ರತಿಯೊಂದು ರಾಜಕೀಯ ಪಕ್ಷಗಳೂ ‘ಇಬ್ಬರು ಮಕ್ಕಳು ಸಾಕು’ ಎಂಬ ಪ್ರಮಾಣಕ್ಕೆ ಬದ್ಧರಾಗಿರುವಂತೆ ನೋಡಿಕೊಳ್ಳಬೇಕು ಎಂದಿರುವ ಅವರು, 2020ರ ವೇಳೆಗೆ ಇದು ಕಡ್ಡಾಯವಾಗಿ ರೂಢಿಸಿಕೊಳ್ಳುವಂತೆ ಪಕ್ಷ ಅಥವಾ ಚುನಾವಣಾ ಆಯೋಗವೇ ಜಾಗೃತಿ ಮೂಡಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ಈ ನಿಟ್ಟಿನಲ್ಲಿ ಪಕ್ಷದಲ್ಲಿ ಇದನ್ನು ಎಲ್ಲರೂ ಅಳವಡಿಸಿಕೊಳ್ಳುವಂತೆ ಗಮನ ಹರಿಸುತ್ತಾರೆನ್ನುವ ವಿಶ್ವಾಸವಿದೆ. 1998ರಲ್ಲಿ ಎಐಸಿಸಿ ಇಟ್ಟಮಹತ್ವದ ಹೆಜ್ಜೆಯನ್ನು ಇಂದು ಬಿಜೆಪಿ, ಪ್ರಧಾನಿ ಮೋದಿ ಅಳವಡಿಸಿಕೊಳ್ಳಲು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!