
ಬೆಂಗಳೂರು(ಫೆ.05): ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಮಾಜಿ ಸಚಿವ ದಿ. ಎಂ.ವೈ ಘೋರ್ಪಡೆ ಅವರ ಪುತ್ರ ಕಾರ್ತಿಕ್ ಘೋರ್ಪಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಸೇರಿದ್ದಾರೆ. ಇವರ ತಂದೆ ದಿ.ಎಂ.ವೈ.ಘೋರ್ಪಡೆ ಬಳ್ಳಾರಿ ಜಿಲ್ಲೆ ಸಂಡೂರು ಕ್ಷೇತ್ರದಲ್ಲಿ ಏಳು ಬಾರಿ ಶಾಸಕ, ಒಮ್ಮೆ ಸಂಸದರಾಗಿದ್ದರು. ಎಸ್.ಎಂ. ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸಂಡೂರು ಸಂಸ್ಥಾನದ ರಾಜವಂಶಸ್ಥ ಘೋರ್ಪಡೆಯವರು ರಾಜಕೀಯದ ಜೊತೆಗೆ ಛಾಯಾಗ್ರಹಣ, ಸಾಹಿತ್ಯ ರಚನೆಯಲ್ಲಿ ಆಸಕ್ತಿ ಹೊಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.