
ನವದೆಹಲಿ[ಮಾ. 04] ನವಜೋತ್ ಸಿಂಗ್ ಸಿಧು ಮತ್ತೆ ವಿವಾದ ಎಬ್ಬಿಸುವ ಕೆಲಸ ಮಾಡಿದ್ದಾರೆ. ವಾಯು ಸೇನೆ ಮುಖ್ಯಸ್ಥ ಮುಖ್ಯಸ್ಥ ಬಿ.ಎಸ್. ಧನೋವಾ ಮಾತನಾಡಿ ನಾವು ಎಷ್ಟು ಮಂದಿ ಉಗ್ರರನ್ನು ಹತ್ಯೆ ಮಾಡಿದ್ದೇವೆ ಎಂಬುದನ್ನು ಲೆಕ್ಕಕ್ಕೆ ಇಡುವ ಕೆಲಸ ಮಾಡುತ್ತಿಲ್ಲ ಎಂದಿದ್ದರು.
ಮಾಧ್ಯಮಗಳು ಸಹ 300 ಉಗ್ರರು ಹತರಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದವು. ಆದರೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ನವಜೊತ್ ಸಿಂಗ್ ಸಿಧು 300 ಉಗ್ರರು ಮೃತಪಟ್ಟಿದ್ದಾರೆ, ಹೌದು ಅಥವಾ ಅಲ್ಲವೋ ? ಇದರ ಉದ್ದೇಶವೇನು ನೀವು ನೆಲಸಮ ಮಾಡಿರುವುದು ಉಗ್ರರನ್ನೋ ಅಥವಾ ಮರಗಳನ್ನೋ? ಇದು ಚುನಾವಣಾ ಗಿಮಿಕ್ ಅಲ್ಲವೇ? ಸೈನ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದಿದ್ದಾರೆ.
ಪಾಕ್ ಜತೆ ಶಾಂತಿ ಎಂದ ಸಿಧುಗೆ ಅಸೆಂಬ್ಲಿಯಲ್ಲೇ ಬಿತ್ತು ಗುದ್ದು!
ಟ್ವೀಟ್ ನಲ್ಲಿ ಯಡಿಯೂರಪ್ಪ, ಹಾಗೂ ಅಹ್ಲುವಾಲಿಯಾ ಹೇಳಿಕೆಯನ್ನು ಸಿಧು ಪ್ರಸ್ತಾಪಿಸಿದ್ದಾರೆ . ಪಾಜಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನಕ್ಕೆ ಸಿಧು ಹೋಗಿ ಬಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.