
ಮಂಗಳೂರು (ಮಾ.14): ಮುಂದಿನ ತಿಂಗಳು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪ-ಚುನಾವಣೆಗಳಿಗೆ ಕಾಂಗ್ರೆಸ್ ಸಿದ್ಧತೆ ಆರಂಭಿಸುವ ಮುಂಚೆಯೇ ಪಕ್ಷದ ಹಿರಿಯ ನಾಯಕ ಸೋಲಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಕಾಂಗ್ರೆಸ್ ಸೋಲುವುದು ಎಂದು ಹಿರಿಯ ನಾಯಕ ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆಗೆ ಮೋದಿ ಮೋಡಿ ಅಗತ್ಯವಿಲ್ಲ, ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್'ಗೆ ಸೋಲುಂಟಾಗಲಿದೆ ಎಂದು ಪೂಜಾರಿ ಹೇಳಿದ್ದಾರೆ.
ಜನಾರ್ದನ ಪೂಜಾರಿ ನುಡಿದಿರುವ ಭವಿಷ್ಯಕ್ಕೆ ಪ್ರತಿಕ್ರಯಿಸಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಪೂಜಾರಿ ಈ ಹಿಂದೆ ಕೂಡ ಹೇಳಿಕೆ ನೀಡಿದ್ದಾರೆ, ಆ ಹೇಳಿಕೆಗಳನ್ನು ಅಲ್ಲೇ ಬಿಡೋಣ, ಪೂಜಾರಿ ಹೇಳಿಕೆಯಿಂದ ಯಾವುದೇ ಪರಿಣಾಮ ಆಗಲ್ಲವೆಂದು ಹೇಳಿದ್ದಾರೆ.
ಏಪ್ರಿಲ್ 9ಕ್ಕೆ ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆಗಳಿಗೆ ಉಪ ಚುನಾವಣೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.