
ಕಲಬುರಗಿ : ಬಿಜೆಪಿ ನಾಯಕ ಉಮೇಶ್ ಜಾಧವ್ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಧವ್ ಬಿಜೆಪಿಯಿಂದ ಐದು ಕೋಟಿ ಪಡೆದಿದ್ದಾರೆ ಎನ್ನುವ ಹೇಳಿಕೆ ನನ್ನದಲ್ಲ. ಚಿಂಚೋಳಿ ಜನರು ಹೀಗೆ ಹೇಳುತ್ತಿದ್ದಾರೆ. ಧೈರ್ಯ ಇದ್ದರೆ ಚಿಂಚೋಳಿ ಜನರಿಗೆ ಅವರು ಪ್ರತಿಕ್ರಿಯೆ ನೀಡಲಿ ಎಂದರು.
ಮಾನನಷ್ಟ ಮೊಕದ್ದಮ್ಮೇ ಹೂಡುವುದಾಗಿ ಹೇಳಿದ ಜಾಧವ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನನಗೂ ಲಾ ಗೊತ್ತು. ನಾನು ಕೂಡ ಲಾ ಪೂರ್ಣಗೊಳಿಸಿದ್ದೇನೆ ಎಂದರು.
ಇನ್ನು ಕೈ ತೊರೆದು ಬಿಜೆಪಿಗೆ ತೆರಳಿದ ಉಮೇಶ್ ಜಾಧವ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಯಾಕೆ ಹೋದರು ಎಂದು ಐದು ಕಾರಣ ನೀಡಲಿ ಎಂದು ಜಾಧವ್ ಗೆ ಸವಾಲು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.