ಸಿಧುಗೆ ಜೀವ ಬೆದರಿಕೆ: Z Plus ಸೆಕ್ಯೂರಿಟಿ ನೀಡಿದ ಮೋದಿ ಸರ್ಕಾರ

Published : Jan 10, 2019, 04:07 PM ISTUpdated : Jan 10, 2019, 04:09 PM IST
ಸಿಧುಗೆ ಜೀವ ಬೆದರಿಕೆ: Z Plus  ಸೆಕ್ಯೂರಿಟಿ ನೀಡಿದ ಮೋದಿ ಸರ್ಕಾರ

ಸಾರಾಂಶ

ಕಾಂಗ್ರೆಸ್ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧುಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಸದ್ಯ ಕೇಂದ್ರ ಸರ್ಕಾರ ಸಿಧು ಭದ್ರತೆಯನ್ನು ಹೆಚ್ಚಿಸಿದೆ.

ಚಂಡೀಗಡ್[ಜ.10]: ಪಂಜಾಬ್ ಸರ್ಕಾರದ ಸಂಪುಟ ಸಚಿವ ನವಜೋತ್ ಸಿಂಗ್ ಸಿಧುರವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸುದ್ದಿ ಸಂಸ್ಥೆ PTI ಈ ಕುರಿತಾಗಿ ವರದಿ ಪ್ರಕಟಿಸಿದ್ದು, ಸಿಧುರವರಿಗೆ ಬರುತ್ತಿರುವ ಜೀವ ಬೆದರಿಕೆಗಳಿಂದ ಭದ್ರತೆ ಹೆಚ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ರಾಜ್ಯ ಸರ್ಕಾರವೂ ಅವರ ಭದ್ರತೆಗಾಗಿ ಬುಲೆಟ್ ಪ್ರೂಫ್ ಕ್ರೂಜರ್ ನೀಡಿದೆ ಎಂದು ಸಿಧು ಆಪ್ತ ಮೂಲಗಳಿಂದ ತಿಳಿದು ಬಂದಿದೆ. 

ಪ್ರಧಾನಿ ಮೋದಿ ನಾಯಿಯೂ ಸುಳ್ಳು ಹೇಳುತ್ತೆ: ಸಿಧು

2018ರಲ್ಲಿ ಕಾಂಗ್ರೆಸ್ ಪಕ್ಷವು ಸಿದೂ ಜೀವಕ್ಕೆ ಅಪಾಯವಿದೆ ಎಂಬ ಅನುಮಾನ ವ್ಯಕ್ತಪಡಿಸಿತ್ತು. ಅಲ್ಲದೇ, ಅವರಿಗೆ CISF ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿತ್ತು. ಕಾಂಗ್ರೆಸ್ ನ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಈ ಕುರಿತಾಗಿ ಕೆಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ರಿಗೆ ಪತ್ರ ಬರೆದು, ಸಿಧು ಪಕ್ಷದ ಪರವಾಗಿ ಬೇರೆ ರಾಜ್ಯಗಳಲ್ಲೂ ಪ್ರಚಾರ ನಡೆಸುತ್ತಿರುವುದರಿಂದ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದ್ದರು. 

ವೈರಿ ರಾಷ್ಟ್ರದ ಪರ ಮಾತನಾಡುವ ಸಿಧುಗೆ ಪಾಕಿಸ್ತಾನದಿಂದ ಬಂಪರ್ ಆಫರ್ !

ಸದ್ಯ ನವಜ್ಯೋತ್ ಸಿಧು ಭದ್ರತೆ ಹೆಚ್ಚಿಸಿ ಝಡ್ ಪ್ಲಸ್ ಸೆಕ್ಯೂರಿಟಿ ನೀಡಲಾಗಿದೆ. ಸಿಧು ಭದ್ರತೆಗಾಗಿ ಈ ಹಿಂದೆ ಇದ್ದ 12 ಮಂದಿ ಸಿಬ್ಬಂದಿ ಸಂಖ್ಯೆಯನ್ನು 25ಕ್ಕೇರಿಸಲಾಗಿದೆ. ಸಿಧುಗೆ ಕೇವಲ ರಾಜಕೀಯ ಪ್ರೇರಿತ ಜೀವ ಬೆದರಿಕೆಗಳು ಮಾತ್ರವಲ್ಲದೇ, ಡ್ರಗ್ಸ್, ಮೈನಿಂಗ್ ಹಾಗೂ ಮಾಫಿಯಾ ಕ್ಷೇತ್ರದಿಂದಲೂ ಬೆದರಿಕೆಗಳು ಬಂದಿವೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು