
ಬೆಂಗಳೂರು (ಜ.25): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಜಿ ಸಚಿವ ಶಿವರಾಂ ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ರೋಹಿಣಿ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ಭ್ರಷ್ಟಾಚಾರ ನಡೆಯುತ್ತಿದೆ, ಒಂದೇ ಒಂದು ಜನತಾದರ್ಶನವನ್ನೂ ಕೂಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ಮಾಡಲಿಲ್ಲ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೇ ರೋಹಿಣಿ ಅವರ ದಕ್ಷತೆ ಪ್ರಮಾಣಿಕತೆಯನ್ನೂ ಕೂಡ ಪ್ರಶ್ನೆ ಮಾಡಿದ ಶಿವರಾಂ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಸ್ತಕಾಭಿಷೇಕದ ಕೆಲಸ ಮಾಡುತ್ತಿರುವುದು ಇವರು ಒಬ್ಬರೇನಾ ಎಂದಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಗೃಹ ಸಚಿವರಿಗೆ ದಾಖಲೆಯನ್ನು ನೀಡುತ್ತೇವೆ ಎಂದಿರುವ ಅವರು, ಇಂತಹ ಡಿಸಿಯನ್ನು ವರ್ಗ ಮಾಡಿರುವುದೇ ಸರಿ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.