
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಅಲ್ಪಸಂಖ್ಯಾತರಲ್ಲಿ ಮನೆ ಮಾಡಿದ್ದ ಭಯವನ್ನು ತಮ್ಮ ಮಾತುಗಳ ಮೂಲಕ ಹೋಗಲಾಡಿಸಿದ್ದಾರೆಂದು ಕಾಂಗ್ರೆಸ್ನ ಹಿರಿಯ ನಾಯಕ ರೋಷನ್ ಬೇಗ್ ಅವರು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಇರಿಸುಮುರುಸು ಉಂಟುಮಾಡಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶಕ್ಕಿಂತ ಮೊದಲು ಹಾಗೂ ನಂತರ ಟ್ವೀಟರ್ನಲ್ಲಿ ಹಾಗೂ ಬಹಿರಂಗವಾಗಿ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದ ರೋಷನ್ ಬೇಗ್ ಮತ್ತೊಮ್ಮೆ ದೇಶದ ಅಲ್ಪಸಂಖ್ಯಾತರ ಕುರಿತು ಪ್ರಧಾನಿ ಆಡಿರುವ ಮಾತುಗಳನ್ನು ಸ್ವಾಗತಿಸಿದ್ದಾರೆ.
ಸೆಂಟ್ರಲ್ ಹಾಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಿದ ಮಾತುಗಳು ಸಂತೋಷ ನೀಡಿವೆ. ಅವರು ಪ್ರಮಾಣವಚನ ಸ್ವೀಕರಿಸುವುದಕ್ಕೂ ಮೊದಲೇ ಏಕತೆಯ ಪ್ರತಿಪಾದನೆ ಮಾಡಿದ್ದಾರೆ. ಇದು ಇಡೀ ಭಾರತವೇ ಒಂದು ಎಂಬುದರತ್ತ ಮೊದಲ ಹೆಜ್ಜೆ ಇಟ್ಟಂತೆ ತೋರುತ್ತದೆ. ಅಲ್ಲದೆ ಹಲವು ವರ್ಷಗಳಿಂದ ಅಲ್ಪಸಂಖ್ಯಾತರಲ್ಲಿ ಮನೆ ಮಾಡಿದ್ದ ಭಯವನ್ನು ಅವರು ತಮ್ಮ ಮಾತುಗಳ ಮೂಲಕ ಹೋಗಲಾಡಿಸಿದರು. ಸಮಗ್ರ ಭಾರತದಲ್ಲಿ ಅವರು ನುಡಿದಂತೆ ನಡೆಯಲಿದ್ದಾರೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.
ಮುಂದಿನ 20 ವರ್ಷ ಬಿಜೆಪಿಯದ್ದೇ ಸರ್ಕಾರ!
ಅವರು ಅಲ್ಪಸಂಖ್ಯಾತರ ವಿಶ್ವಾಸ ಗಳಿಸಬೇಕು ಎಂದು ಸಂಸದರಿಗೆ ನೀಡಿರುವ ಕರೆ ರಾಜಕೀಯ ಉದ್ದೇಶಕ್ಕಾಗಿ ಅಥವಾ ಅಲ್ಪಸಂಖ್ಯಾತ ಸಮುದಾಯವನ್ನು ಮತ ಬ್ಯಾಂಕ್ ಆಗಿ ಮಾಡಿಕೊಳ್ಳಲು ಹೇಳಿದಂತೆ ಕಾಣಿಸುವುದಿಲ್ಲ. ಏಕೆಂದರೆ ಅವರು ಚುನಾವಣೆ ಮುಗಿದು ಗೆಲುವು ಸಾಧಿಸಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಈ ಮಾತು ಹೇಳಿದ್ದಾರೆ. ಭಾರತೀಯ ರಾಜಕೀಯ ವ್ಯವಸ್ಥೆಯಲ್ಲಾದ ಬದಲಾವಣೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮೂವರು ನಾಯಕರಿಗೆ ಕೇಂದ್ರ ಸಚಿವ ಸ್ಥಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.