
ಶಿವಮೊಗ್ಗ (ಅ. 24): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು.
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ. ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್ ಮತ್ತೆ ತನ್ನ ಶಕ್ತಿಯನ್ನು ಪಡೆದುಕೊಳ್ಳಲು ಹಲವು ದಶಕಗಳೇ ಬೇಕಾಗುತ್ತದೆ ಎಂದರು.
ಕಾಗೋಡು ತಿಮ್ಮಪ್ಪ ಅವರನ್ನು ಹಿರಿಯ ರಾಜಕಾರಣಿ, ಸಜ್ಜನ ರಾಜಕಾರಣಿ ಎಂದೆಲ್ಲ ಕರೆಯುತ್ತಾರೆ. ಆದರೆ ಇವರು ಕಾಂಗ್ರೆಸ್ ಪಕ್ಷವನ್ನೇ ದುರ್ಬಲಗೊಳಿಸಿ ನಾಶದ ಅಂಚಿಗೆ ತಂದು ನಿಲ್ಲಿಸಿದ್ದಾರೆ. ಸ್ವಜನ ಪಕ್ಷಪಾತಕ್ಕೆ ಹೆಸರಾದವರು. ಬ್ರಾಹ್ಮಣ, ವೀರಶೈವ, ಅಹಿಂದಗಳನ್ನು ತುಳಿದವರು. ತಮ್ಮ ಎದುರಾಳಿಗೆ ಈಗ ಸಹಾಯ ಮಾಡಲು ಹೊರಟಿದ್ದಾರೆ. ಇದ್ಯಾವ ಚುನಾವಣೆಯ ಯುದ್ಧದ ನೀತಿ ಎಂದು ಪ್ರಶ್ನಿಸಿದರು.
ಮುಂಬರುವ ದಿನದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಹುನ್ನಾರ ನಡೆದಿದೆ. ಪಕ್ಷವನ್ನು ಕಾಗೋಡು ತಿಮ್ಮಪ್ಪ 20 ವರ್ಷ ಹಿಂದಕ್ಕೆ ಕೊಂಡೊಯ್ದಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಹುನ್ನಾರ ಕಾಂಗ್ರೆಸ್ನಿಂದಲೇ ನಡೆದಿದೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.