
ಬೆಳಗಾವಿ[ಜು. 13] ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಎರಡು ಕಣ್ಣು. ಬೆಳಗಾವಿಯಿಂದ ರಮೇಶ್ ಮತ್ತು ಮಹೇಶ್ ಬಿಟ್ಟು ಬೇರೆ ಶಾಸಕರು ರಾಜೀನಾಮೆ ನೀಡುವುದಿಲ್ಲ. ರಮೇಶ್ ಜಾರಕಿಹೊಳಿ ಕಳೆದುಕೊಂಡಿರುವ ವಸ್ತು ಇನ್ನೂ ಸಿಕ್ಕಿಲ್ಲ. ವಸ್ತು ಸಿಕ್ಕಿಲ್ಲಾ ಅಂತಾನೆ ಇನ್ನೂ ಗದ್ದಲ ಹಿಡಿದಿರುವುದು ..ಸಿಗುತ್ತೋ.. ಇಲ್ಲವೋ ಕಾದುನೋಡಬೇಕಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಅಣ್ಣತಮ್ಮಂದಿರು ಅನ್ನೋದಕ್ಕಿಂತ ನಮಗೆ ಪಕ್ಷ ಮುಖ್ಯ. ಉಪಚುನಾವಣೆಯಲ್ಲಿ ಸಹೋದರರ ನಡುವೆ ಸಮರ ಖಚಿತವಾಗಿದೆ. ಗೋಕಾಕ್ ನಲ್ಲಿ ನಮ್ಮ ಪಕ್ಷದಿಂದ ನಾವು ಹೋರಾಟ ಮಾಡುತ್ತೇವೆ ಪಕ್ಷ ಸಂಘಟಿಸುತ್ತೆವೆ ಎಂದು ಪರೋಕ್ಷವಾಗಿ ಲಖನ್ ಸ್ಪರ್ಧೆ ಬಗ್ಗೆ ಹೇಳಿದರು.
MTB ಇಟ್ಟ ಬೇಡಿಕೆಗೆ ಬೆಚ್ಚಿಬಿದ್ರು, ಸಿದ್ದು ಮನೆಯ ಸುದೀರ್ಘ ಮಾತುಕತೆ ವಿಫಲ
ರಮೇಶ್ ಪತ್ನಿ ಅಥವಾ ಅಳಿಯ ಅಂಬಿರಾವ್ ನಿಂತ್ರೂ ಲಖನ್ ಗೋಕಾಕ್ ನಲ್ಲಿ ಸ್ಪರ್ಧಿಸುವುದು ಖಚಿತ. ರಮೇಶ್ ಮೂರು ಜನ ಅಳಿಯಂದಿರಗಾಗಿ ರಾಜೀನಾಮೆ ಕೊಟ್ಟಿದ್ದು ನಿಜ. ನಾವು ರಿವರ್ಸ್ ಆಪರೇಷನ್ ಮಾಡಬೇಕೆಂಬ ಅಗತ್ಯ ಇಲ್ಲ ಎಂದು ಹೇಳಿದರು.
ನಮ್ಮವರು ವಾಪಸ್ ಬಂದರೆ ಸರಕಾರ ಉಳಿಯುತ್ತದೆ. ಈಗಾಗಲೇ ನಾಲ್ಕು ಜನ ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ. ಮುಂಬೈನಲ್ಲಿರುವ ಇಬ್ಬರು ಶಾಸಕರು ಬಂದ್ರೆ ಸರ್ಕಾರ ಸೇಫ್ ಆಗಿ ಮುಂದುವರಿಯಲಿದೆ. ಸರ್ಕಾರ ಉಳಿಸಿಕೊಳ್ಳುವ ಕೆಲಸ ಎಲ್ಲರೂ ಮಾಡುತ್ತಿದ್ದಾರೆ. ಈ ಸರ್ಕಾರದಿಂದಲೂ ತಪ್ಪಾಗಿರಬಹುದು. ಈಗ ಅದನ್ನ ಸರಿಪಡಿಸಿಕೊಳ್ಳಲಾಗುತ್ತಿದೆ ಎಂದರು.
ಬಿಜೆಪಿ ಪದೇ ಪದೇ ಸರ್ಕಾರ ಬೀಳಿಸುವ ಕೆಲಸ ಮಾಡಿಕೊಂಡು ಬರ್ತಾಯಿದೆ. ಬಿಜೆಪಿ ಪಕ್ಷ ಅಧಿಕಾರ ತರಲು ಅಮಿತ್ ಶಾ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಬೇರೆಯವರನ್ನ ಸಚಿವರನ್ನ ಮಾಡಿದ್ರೂ, ಇಲ್ಲ ನಮ್ಮನ್ನ ಮುಂದುವರಿಸಿದರೂ ನಾವು ಸಿದ್ದರಿದ್ದೇವೆ. ಮುಂಬೈನಿಂದ ಒಬ್ಬ ಶಾಸಕರನ್ನ ಕರೆದುಕೊಂಡು ಹೋಗಿ ಬರಲು ವಿಮಾನಕ್ಕೆ ಹತ್ತು ಲಕ್ಷ ರೂ.ಖರ್ಚಾಗುತ್ತೆ. ಅಲ್ಲಿ ಹೋಟೆಲ್ ಬುಕ್ಕಿಂಗ್ ಸೇರಿದಂತೆ ಎಲ್ಲವನ್ನೂ ಬಿಜೆಪಿ ನೋಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅತೃಪ್ತ ಶಾಸಕರಿಗೆ ಇನ್ನೂ ಕಾಲಾವಕಾಶ ಇದೆ. ರಮೇಶ್ ಜಾರಕಿಹೊಳಿಯನ್ನ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಮಾಡಿದ್ರೂ ಬರುವುದಿಲ್ಲ ಎಂದು ರಮೇಶ್ ಮೇಲೆ ವಾಗ್ದಾಳಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.