ಎಂಬಿಪಿಗೆ ದೊಡ್ಡ ಸಹಾಯ ಮಾಡಿದ್ದ ಬಿಜೆಪಿ ನಾಯಕ ಯಾರು? ಶಾಮನೂರು ರಹಸ್ಯ

Published : Jan 14, 2019, 06:11 PM ISTUpdated : Jan 14, 2019, 06:12 PM IST
ಎಂಬಿಪಿಗೆ ದೊಡ್ಡ ಸಹಾಯ ಮಾಡಿದ್ದ ಬಿಜೆಪಿ ನಾಯಕ ಯಾರು? ಶಾಮನೂರು ರಹಸ್ಯ

ಸಾರಾಂಶ

ಕಾಂಗ್ರೆಸ್‌ನ ಇಬ್ಬರು ನಾಯಕರ ನಡುವೆ ಕಿತ್ತಾಟ ಮುಂದುವರಿದಿದೆ. ಶಾಮನೂರು ಶಿವಶಂಕರಪ್ಪ ಮತ್ತು ಗೃಹ ಸಚಿವ ಎಂಬಿ ಪಾಟೀಲ್ ಒಬ್ಬರ ಮೇಲೆ ಒಬ್ಬರು ಹೇಳಿಕೆ ನೀಡುತ್ತಿದ್ದಾರೆ.

ಧಾರವಾಡ[ಜ.14]  ಗೃಹ ಸಚಿವ ಎಂಬಿ ಪಾಟೀಲ್ ಅವರನ್ನು ‘ಮಂಗ’ ಎಂದು ಕರೆದಿದ್ದ ಶಾಮನೂರು ಮತ್ತೆ  ತಮ್ಮ ವಾಗ್ಬಾಣಗಳನ್ನು ಮುಂದುವರಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಶಂಕರಪ್ಪ ‘ಆತನಿಗೆ ವಿಚಾರಗಳು ಗೊತ್ತಿಲ್ಲ, ಅದಕ್ಕೆ ಹೀಗೆಲ್ಲ ಮಾತನಾಡುತ್ತಾ ಇದ್ದಾನೆ.  ಆತನನ್ನು ನಿರ್ಲಕ್ಷ್ಯ ಮಾಡಿ ಬಿಡಬೇಕು ಅಂತಾ ನಾವೆಲ್ಲ ನಿರ್ಧರಿಸಿದ್ದೇವೆ’ ಎಂದು ಏಕವಚನದಲ್ಲಿಯೇ ದಾಳಿ ಮಾಡಿದರು.

ನಾನು ಹಿರಿಯನಾಗಿ ಮಾತನಾಡಿ ಹೇಳಿದಾಗ ಸುಧಾರಿಸಿಕೊಳ್ಳಬೇಕಿತ್ತು.  ಪ್ರಭಾಕರ ಕೋರೆ ಮತ್ತು ನಾನು ಎಂಬಿಗೆ ತುಂಬಾ ಸಹಾಯ ಮಾಡಿದ್ದೇವೆ. ಅದನ್ನೆಲ್ಲ ಆತ ಮರೆತು ಬಿಟ್ಟಿದ್ದಾನೆ. ನಾನು ಆ ಬಗ್ಗೆ ಮಾತನಾಡಬಾರು ಅಂತಾ ವಿಷಯ ಕ್ಲೋಸ್ ಮಾಡಿದ್ದೇವೆ ಎಂದರು.

ನನಗೆ ಸಚಿವ ಸ್ಥಾನ ಏನೂ ಬೇಕಾಗಿಲ್ಲ.  ಬಿಜೆಪಿಯವರಿಂದ ಏನೂ ಆಗುವುದಿಲ್ಲ. ಸುಮ್ಮನೇ ಅವರು ಹೇಳ್ತಾ ಇರತಾರಷ್ಟೇ. ನಮ್ಮ‌ ಪಕ್ಷದಿಂದ ಯಾರೂ ಎಲ್ಲಿಗೂ ಹೋಗುವುದಿಲ್ಲ ಎಂದು ಉಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?