'ಆಪರೇಶನ್ ಕಮಲ ಇಲ್ಲಿಗೆ ಅಂತ್ಯವಾಗಲಿದೆ'

By Web DeskFirst Published Jul 24, 2019, 5:05 PM IST
Highlights

ಈಗ ಎಲ್ಲರ ಮುಂದೆ ಇರುವ ಪ್ರಶ್ನೆ ಒಂದೇ. ರಾಜೀನಾಮೆ ಕೊಟ್ಟು ಮುಂಬೈಗೆ ತೆರಳಿರುವ ಅತೃಪ್ತರ ಮುಂದಿನ ನಡೆ ಏನು? ಅವರು ಏನಾದರೂ ಮಾಡಿಕೊಳ್ಳಲಿ ಆದರೆ ವಿಪ್ ಗೆ ಉತ್ತರ ನೀಡಲೇಬೇಕು ಎಂದು ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್  ಹೇಳಿದರು.

ಬೆಂಗಳೂರು(ಜು. 24)  ಅತೃಪ್ತರಿಗೆ ಸ್ಪೀಕರ್ ಬರಲಿಕ್ಕೆ ಸೂಚನೆ ನೀಡಿದ್ದಾರೆ. ಅತೃಪ್ತರು ಬರಲಿ ಆಗ ಎಲ್ಲವೂ ಗೊತ್ತಾಗುತ್ತದೆ.  ವಿಫ್ ಉಲ್ಲಂಘನೆ  ಮಾಡಿದ್ದಕ್ಕೆ ಅವರು ಉತ್ತರ ಕೊಡಲೇಬೇಕಾಗುತ್ತೆ. ಏನು ಉತ್ತರ ನೀಡುತ್ತಾರೆ ಕಾದು ನೋಡಬೇಕು ಎಂದು ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಹೇಳಿದ್ದಾರೆ.

ಆಪರೇಷನ್ ಕಮಲ ಏನು ಹೊಸದಲ್ಲ, ಈ ಹಿಂದೆಯೂ ಬಿಜೆಪಿ ಮಾಡಿದೆ. ಇದಾಗ್ಲೆ ಎರಡನೆ ಬಾರಿ ಪ್ರಯತ್ನ ಮಾಡಿರೋದು. ಈ ಸಂಸ್ಕೃತಿ ಇಲ್ಲಿಗೆ ಅಂತ್ಯ ಆಗಲಿದೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.

ಮೈತ್ರಿ ಮುಂದುವರಿದ್ರೆ ಯಾರಿಗೆ ಲಾಭ? ಮುರಿದರೆ ಯಾರಿಗೆ ನಷ್ಟ?

ಮಂಗಳವಾರ ನಡೆದ ವಿಶ್ವಾಸನಮತ ಪ್ರಕ್ರಿಯೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಸರ್ಕಾರ ವಿಶ್ವಾಸ ಮತ ಕಳೆದುಕೊಂಡಿತ್ತು. ಕಳೆದ ಒಂದು ತಿಂಗಳಿನಿಂದಲೂ ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ನಡೆಯುತ್ತಲೇ ಇದೆ.

 


 

click me!