
ಬೆಂಗಳೂರು : ಕಾಂಗ್ರೆಸ್ಸಲ್ಲಿ ನಾನೇ ಸಿಎಂ ಅಭ್ಯರ್ಥಿ, ಮತ್ತೆ ಸಿಎಂ ಆದರೆ ಬಡವರಿಗೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ. ಸಾರ್ವಜನಿಕ ಜೀವನದಲ್ಲಿ ಇರುವ ನಮಗೆ ಬಹಳ ಜನರ ಸೀಕ್ರೆಟ್ಸ್ ಗೊತ್ತಿರುತ್ತೆ, ನಾನು ಚೀಫ್ ಮಿನಿಸ್ಟರ್ ಆದಾಗ ಎಲ್ಲವನ್ನೂ ಹೇಳುತ್ತೇನೆ ಅಂದಿದ್ದಾರೆ ಕಾಂಗ್ರೆಸ್ ನಾಯಕ, ಸಚಿವ ಡಿ.ಕೆ.ಶಿವಕುಮಾರ್.
ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಆಗುತ್ತೇನೆ ಎಂದಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ಸಿದ್ದು ಅವರೇ ಸಿಎಂ ಅಭ್ಯರ್ಥಿ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ, ಅಷ್ಟಕ್ಕೂ ಡಿಕೆಶಿ, ಪರಂ ಅವರುಗಳು ಸಿದ್ದರಾಮಯ್ಯ ಸಿಎಂ ಆಗಲು ಬಿಡುತ್ತಾರಾ ಎಂದು ವ್ಯಂಗ್ಯವಾಡಿದ್ದಾರೆ ಬಿಜೆಪಿ ನಾಯಕರು.
ಒಟ್ಟಿನಲ್ಲಿ ಲೋಕಸಭಾ ಚುನಾವಣೆ ನಡೆದು ಮುಂದಿನ ಸರ್ಕಾರ, ಪ್ರಧಾನಿ ಯಾರೆಂಬುದು ಚರ್ಚೆಯಾಗಬೇಕಾದ ಈ ಹೊತ್ತಿನಲ್ಲಿ ಇದ್ದಕ್ಕಿದ್ದಂತೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಕುರಿತ ಮಾತು ಹಠಾತ್ತನೆ ಉದ್ಭವವಾಗಿದ್ದು, ರಾಜ್ಯ ರಾಜಕೀಯದಲ್ಲಿ ಕೌತುಕಭರಿತ ಸಂಚಲನಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.