ಮೈಸೂರಿನಿಂದ ದೇವೇಗೌಡ ಸ್ಪರ್ಧೆ, ಸಿದ್ಧರಾಮಯ್ಯ ಫುಲ್ ಗರಂ

Published : Mar 05, 2019, 04:11 PM ISTUpdated : Mar 11, 2019, 12:05 PM IST
ಮೈಸೂರಿನಿಂದ ದೇವೇಗೌಡ ಸ್ಪರ್ಧೆ,  ಸಿದ್ಧರಾಮಯ್ಯ ಫುಲ್ ಗರಂ

ಸಾರಾಂಶ

ದೋಸ್ತಿಗಳ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಈಗ ಮತ್ತೊಂದು ಹೆಸರು ಸೇರಿಕೊಂಡಿದೆ. ಮೈಸೂರಿನಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧೆ ಮಾಡುತ್ತಾರೆ ಎಂದು ಜಿ.ಟಿ.ದೇವೇಗೌಡರು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲ ಉಂಟುಮಾಡಿದೆ.

ಬದಾಮಿ(ಮಾ. 05)  ಮೈಸೂರಲ್ಲಿ ಎಚ್.ಡಿ.ದೇವೇಗೌಡ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಜಿ. ಟಿ .ದೇವೇಗೌಡ, ಮೈಸೂರಿನಿಂದ  ಎಚ್ಡಿಡಿ ಸ್ಪರ್ಧಿಸುತ್ತಾರೆ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಗರಂ ಆಗಿದ್ದರು. ಬಾದಾಮಿ ಮತಕ್ಷೇತ್ರದ  ಕೆಂದೂರಲ್ಲಿ ಮಾತನಾಡಿ, ದೇವೇಗೌಡ ಮೈಸೂರಿನಿಂದ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಯಾರು ಹೇಳಿದ್ದಾರೆ ಅವರನ್ನೇ ಕೇಳಿ ಎಂದು ಗರಂ ಆಗಿಯೇ ಹೇಳಿದರು.

ಲೋಕಸಭಾ ಚುನಾವಣೆ ಘೋಷಣೆಗೆ ಮುಹೂರ್ತ ಫಿಕ್ಸ್?

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ ದೇವೇಗೌಡರ ಸ್ಪರ್ಧೆ ವಿಚಾರದ ಬಗ್ಗೆ ಸ್ಪಷ್ಟವಾಗಿ ಏನೂ ಹೇಳಲಿಲ್ಲ.  ದೋಸ್ತಿಗಳ ನಡುವೆ ಟಿಕೆಟ್ ಹಂಚಿಕೆ ಗೊಂದಲ ಮುಂದುವರಿದೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ