ಕಾಂಗ್ರೆಸ್ ಶಾಸಕ ಚುನಾವಣಾ ನಿವೃತ್ತಿ

Published : Sep 06, 2018, 11:45 AM ISTUpdated : Sep 09, 2018, 09:15 PM IST
ಕಾಂಗ್ರೆಸ್ ಶಾಸಕ ಚುನಾವಣಾ ನಿವೃತ್ತಿ

ಸಾರಾಂಶ

ಕಾಂಗ್ರೆಸ್ ಮುಖಂಡರೋರ್ವರು ಇದೀಗ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯದಿಂದ ತಾವೂ ದೂರ ಉಳಿಯುವುದಾಗಿ ಅವರು ಹೇಳಿದ್ದಾರೆ. 

ಹೊಸಪೇಟೆ :  ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ ಸಿಂಗ್‌ ಅವರು ಚುನಾವಣಾ ರಾಜಕೀಯದಿಂದ ದೂರವುಳಿಯುವ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ. ‘ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ’ ಎಂದು ಹೇಳಿದ್ದಾರೆ.

ಬುಧವಾರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಮತದಾರರು ನನಗೆ ಆಶೀರ್ವದಿಸಿದ್ದಾರೆ. ನನಗೂ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಬೇಕು ಎನ್ನುವ ಅಭಿಲಾಷೆ ಮತ್ತು ಛಲ ಇತ್ತು. ಅದರಂತೆ ಮೂರು ಬಾರಿ ಗೆದ್ದಿದ್ದೇನೆ. ಮತ್ತೊಮ್ಮೆ ಶಾಸಕನಾಗಬೇಕೆಂಬ ಆಸೆಯುಳ್ಳ ವ್ಯಕ್ತಿ ನಾನಲ್ಲ. ಮುಂದಿನ ದಿನಗಳಲ್ಲಿ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಿಂದ ಯಾರಿಗಾದರೂ ಬೆಂಬಲ ನೀಡಿ ಅವರ ಪರ ಕೆಲಸ ಮಾಡುತ್ತೇನೆ. ಕ್ಷೇತ್ರದಲ್ಲಿ ಶಾಸಕನಾಗಿ ಅಭಿವೃದ್ಧಿ ಕಾರ್ಯ ಮಾಡಬೇಕೆಂಬ ಕನಸು ಕಾಣುತ್ತಿರುವ ಹಲವು ಉತ್ಸಾಹಿ ಯುವಕರು ಇದ್ದಾರೆ. ಅಂಥವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

ನಾನು ರಾಜಕೀಯವಾಗಿ ಬೆಳೆದಿದ್ದು ವಾಲ್ಮೀಕಿ ಸಮಾಜದಿಂದಲೇ. ಹೊಸಪೇಟೆಯಲ್ಲಿ ವಾಲ್ಮೀಕಿ ಸಮಾಜದ ಸಮಾವೇಶ ನಡೆದಾಗ ಪುಣ್ಯಾನಂದಪುರಿ ಸ್ವಾಮೀಜಿಗಳು ನನ್ನನ್ನು ಗುರುತಿಸಿ ಬೆಳೆಸಿದ್ದಾರೆ. ವಾಲ್ಮೀಕಿ ಸಮಾಜದವರು ನನ್ನನ್ನು ಕೈ ಬಿಟ್ಟರೂ ನಾನು ವಾಲ್ಮೀಕಿ ಸಮಾಜವನ್ನು ಕೈ ಬಿಡುವುದಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ