ಕಾಂಗ್ರೆಸ್‌ಗೆ ಮಾಜಿ ಸಚಿವ ರಾಜೀನಾಮೆ : ಕೈಗೆ ಭಾರಿ ಹಿನ್ನೆಲೆ

Published : Mar 11, 2019, 10:16 AM IST
ಕಾಂಗ್ರೆಸ್‌ಗೆ ಮಾಜಿ ಸಚಿವ ರಾಜೀನಾಮೆ :  ಕೈಗೆ ಭಾರಿ ಹಿನ್ನೆಲೆ

ಸಾರಾಂಶ

ಲೋಕಸಭಾ ಚುನಾವಣೆ ದಿನಾಂಕ ಘೊಷಣೆಯಾಗಿದೆ. ಇದೇ ವೇಳೆ ಕಾಂಗ್ರೆಸ್ ಮುಖಂಡರೋರ್ವರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. 

ಕಲಬುರಗಿ :  ಮಾಜಿ ಸಚಿವ, ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ ಎನ್ನುವಾಗ ನಡೆದಿರುವ ಈ ಬೆಳವಣಿಗೆ ಕಾಂಗ್ರೆಸ್‌ ಪಕ್ಷ ಸಂಘಟನೆ ವಿಚಾರದಲ್ಲಿ ಹೈ-ಕ ಮಟ್ಟಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

371 (ಜೆ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಈ ಬಗ್ಗೆ ಗಮನಕ್ಕೂ ತಂದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಅನುದಾನ ಪೂರ್ಣವಾಗಿ ಖರ್ಚಾಗುತ್ತಿಲ್ಲ. ಇದರಿಂದ ನೊಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ರವಾನಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ನಮಗೆ ಯಾವುದೇ ವಿಧದಲ್ಲಿ ಬೆಲೆ ದೊರಕುತ್ತಿಲ್ಲ ಎಂದು ಪಾಟೀಲರು ಅಸಮಾಧಾನದಲ್ಲಿದ್ದರು. ಲೋಕಸಭೆ ಚುನಾವಣೆ ಹಂತದಲ್ಲೇ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಜಿಲ್ಲಾ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. 

ಈ ಬಾರಿಯ ಲೋಕಸಭೆ ಸಮರದಲ್ಲಿ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ ಕಣಕ್ಕಿಳಿಯುತ್ತಿರುವದರಿಂದ ವೈಜನಾಥ ಪಾಟೀಲರು ಬರುವ ದಿನಗಳಲ್ಲಿ ತಮ್ಮ ಬೆಂಬಲವನ್ನು ಡಾ.ಜಾಧವ ಪರ ವ್ಯಕ್ತಪಡಿಸುವ ಸಾಧ್ಯತೆಗಳಿವೆ. ಆದರೂ ವೈಜನಾಥ ಪಾಟೀಲರು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಯಾವುದೇ ಸುಳಿವು ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಧಾರ್‌ ಲಿಂಕ್‌ ಕಮಾಲ್‌, ಒಂದೇ ವರ್ಷದಲ್ಲಿ 3 ಕೋಟಿ ಫೇಕ್‌ IRCTC ಅಕೌಂಟ್‌ ಬಂದ್‌ ಮಾಡಿದ ಭಾರತೀಯ ರೈಲ್ವೇ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ