
ಬೆಳಗಾವಿ (ಜ.25): ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯವರೇ ಆದ ಹಿರಿಯ ಕಾಂಗ್ರೆಸ್ ನಾಯಕರೇ ಈ ದಾಳಿ ಹಿಂದೆ ಇದ್ದಾರೆ. ಇದರಿಂದಾಗಿಯೇ ಸಣ್ಣ ಕೈಗಾರಿಕಾ ಸಚಿವರ ನಿವಾಸಗಳ ಮೇಲೆ ದಾಳಿ ನಡೆದಿದೆ ಎಂದು ಕುಮಾರಸ್ವಾಮಿ ಬಾಂಬ್ ಹಾಕಿದ್ದಾರೆ.
ಬೈಲಹೊಂಗಲದಲ್ಲಿ ಧರ್ಮಸ್ಥಳ ಸಂಸ್ಥೆಯವರು ಆಯೋಜಿಸಿದ್ದ ಕೃಷಿ ಮೇಳಕ್ಕೆ ಹೋಗುವ ಮುನ್ನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್’ನವರೇ ಮಂತ್ರಿ ಆಗಲು ರಮೇಶ ಜಾರಕಿಹೊಳಿ ವಿರುದ್ಧ ಐಟಿಗೆ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.