ಸಿಎಂ ಸಿದ್ದರಾಮಯ್ಯಗೆ ಪಕ್ಕಾ ಆಯ್ತಾ ಬಾದಾಮಿ ಟಿಕೆಟ್..?

Published : Mar 26, 2018, 01:46 PM ISTUpdated : Apr 11, 2018, 12:56 PM IST
ಸಿಎಂ ಸಿದ್ದರಾಮಯ್ಯಗೆ ಪಕ್ಕಾ ಆಯ್ತಾ ಬಾದಾಮಿ ಟಿಕೆಟ್..?

ಸಾರಾಂಶ

ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸುತ್ತಿದ್ದು, ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಬಾರಿ ಚರ್ಚೆ ನಡೆಯುತ್ತಿದೆ. ಅಲ್ಲಿ ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡದಿರಲು  ಸಭೆಯಲ್ಲಿ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು :  ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸುತ್ತಿದ್ದು, ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು  ಚರ್ಚೆ ನಡೆಯುತ್ತಿದೆ. ಅಲ್ಲಿ ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡದಿರಲು  ಸಭೆಯಲ್ಲಿ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾದಾಮಿಗೆ ನೀವು ಬಂದು ನಿಲ್ಲಿ ಎಂದು ಜನರು ಹೇಳುತ್ತಿದ್ದಾರೆ ಎಂದು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ನೀವೇ ನಿಲ್ಲುವುದಾದರೆ ನಿಮ್ಮ ಒಂದೇ ಹೆಸರನ್ನು ಲಿಸ್ಟ್ ಮಾಡುವುದಾಗಿ ಪರಮೇಶ್ವರ್ ಹೇಳಿದ್ದು, ನೀವು ಅಲ್ಲಿ ನಿಂತರೆ ಗೆದ್ದೇ ಗೆಲ್ಲುತ್ತೀರಾ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ.

ಇನ್ನು ಈಗಲೇ ಈ ಬಗ್ಗೆ ಫೈನಲ್ ಮಾಡುವುದು ಬೇಡ. ದೇವರಾಜ್ ಪಾಟೀಲ್ ಕೂಡ ಅಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರೂ ಗೆಲ್ಲುವ ಅಭ್ಯರ್ಥಿಯಾಗಿದ್ದು, ಅವರನ್ನೂ ಕಣಕ್ಕಿಳಿಸುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಮೈಸೂರಿನಲ್ಲಿಯೂ ಕೂಡ ನಾನು 2 ಕ್ಷೇತ್ರ  ನೋಡಿಕೊಳ್ಳಬೇಕು ಎಂದು ಸಿಎಂ ಹೇಳಿದರು.ಇನ್ನು ಹಾನಗಲ್’ನಲ್ಲಿಯೂ ಕೂಡ ಮನೋಹರ್ ತಹಶೀಲ್ದಾರ್  ಬದಲು ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದ್ದು, ಗುಲ್ಬರ್ಗಾ ಕ್ಷೇತ್ರದ ಜಿ. ರಾಮಕೃಷ್ಣ ಅವರ ಬದಲು ಬೇರೆ ಅಭ್ಯರ್ಥಿಯ ಬಗ್ಗೆ ಸಮಿತಿಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನು ಅಂಬರೀಶ್ ಹಾಗೂ ಯಾದಗಿರಿ ಅಭ್ಯರ್ಥಿ ಬಗ್ಗೆಯೂ ಕೂಡ ಚರ್ಚೆ ನಡೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ