
ನವದೆಹಲಿ(ಏ.09): ಬಗೆಬಗೆಯ ಮೆನುವಿನ ಭರ್ಜರಿ ಊಟ ಮಾಡಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಕಾಂಗ್ರೆಸ್ ನಾಯಕರ ಭಾವಚಿತ್ರ ಎಲ್ಲಡೆ ವೈರಲ್ ಆಗಿದೆ.
ದೆಹಲಿ ಪ್ರಮುಖ ಕಾಂಗ್ರೆಸ್ ಮುಖಂಡ ಅಜಯ್ ಮೆಕಾನ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿಬಿಎಸ್'ಸಿ ಪ್ರಶ್ನೆಪತ್ರಿಕೆ ಸೋರಿಕೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ,ಕಾವೇರಿ ವಿವಾದ ಮುಂತಾದ ವಿಷಯಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಒಂದು ದಿನದ ಉಪವಾಸ ಕೈಕೊಳ್ಳಲು ತೀರ್ಮಾನಿಸಿತ್ತು.
ಉಪವಾಸ ಕೈಗೊಳ್ಳುವ ಮುಂಚೆ ಕಾಂಗ್ರೆಸ್ ನಾಯಕರು ಸ್ಥಳೀಯ ಹೋಟೆಲ್'ನಲ್ಲಿ ಭರ್ಜರಿ ಊಟ ಸೇವಿಸಿದ್ದಾರೆ. ಮುಖಂಡರು ಊಟ ಸೇವಿಸಿ ಉಪವಾಸ ಕೈಗೊಂಡ ದೃಶ್ಯ ಎಲ್ಲದೆ ವೈರಲ್ ಆಗಿ ಸಾಮಾಜಿಕ ಮಾಧ್ಯಮಗಳಲ್ಲಿ ನಾಯಕರ ವಿರುದ್ಧ ಬೈಗುಳಗಳ ಸುರಿಮಳೆಯೆ ಹರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.