ಎಐಸಿಸಿ ಮಹಾಧಿವೇಶನಕ್ಕೆ ರಾಜ್ಯದ 100 ನಾಯಕರು

Published : Mar 15, 2018, 09:35 AM ISTUpdated : Apr 11, 2018, 12:46 PM IST
ಎಐಸಿಸಿ ಮಹಾಧಿವೇಶನಕ್ಕೆ ರಾಜ್ಯದ 100 ನಾಯಕರು

ಸಾರಾಂಶ

ದೆಹ​ಲಿ​ಯಲ್ಲಿ ಮಾ.16ರಿಂದ ಮೂರು ದಿನ​ ನಡೆ​ಯ​ಲಿ​ರುವ ಎಐ​ಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊ​ಳ್ಳಲು ಮುಖ್ಯ​ಮಂತ್ರಿ ಸಿದ್ದ​ರಾ​ಮಯ್ಯ, ಕೆಪಿ​ಸಿಸಿ ಅಧ್ಯ​ಕ್ಷ ಡಾ.ಜಿ. ಪರ​ಮೇ​ಶ್ವರ್‌ ಸೇರಿ​ದಂತೆ ರಾಜ್ಯ ಕಾಂಗ್ರೆಸ್‌ ನಾಯ​ಕ​ರ ದೊಡ್ಡ ದಂಡೇ ಗುರು​ವಾರ ಸಂಜೆ ದೆಹ​ಲಿಗೆ ತೆರ​ಳ​ಲಿ​ದೆ.

ಬೆಂಗಳೂರು : ದೆಹ​ಲಿ​ಯಲ್ಲಿ ಮಾ.16ರಿಂದ ಮೂರು ದಿನ​ ನಡೆ​ಯ​ಲಿ​ರುವ ಎಐ​ಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊ​ಳ್ಳಲು ಮುಖ್ಯ​ಮಂತ್ರಿ ಸಿದ್ದ​ರಾ​ಮಯ್ಯ, ಕೆಪಿ​ಸಿಸಿ ಅಧ್ಯ​ಕ್ಷ ಡಾ.ಜಿ. ಪರ​ಮೇ​ಶ್ವರ್‌ ಸೇರಿ​ದಂತೆ ರಾಜ್ಯ ಕಾಂಗ್ರೆಸ್‌ ನಾಯ​ಕ​ರ ದೊಡ್ಡ ದಂಡೇ ಗುರು​ವಾರ ಸಂಜೆ ದೆಹ​ಲಿಗೆ ತೆರ​ಳ​ಲಿ​ದೆ.

ಸಿದ್ದರಾಮಯ್ಯ ಅವರ ಜತೆಗೆ ಪರಮೇಶ್ವರ್‌, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವರು ಹಾಗೂ ಪದಾ​ಧಿ​ಕಾ​ರಿ​ಗಳು ಸೇರಿದಂತೆ ನೂರು ಮಂದಿಗೆ ಈ ಮಹಾ​ಧಿ​ವೇ​ಶ​ನ​ದಲ್ಲಿ ಪಾಲ್ಗೊ​ಳ್ಳಲು ಆಹ್ವಾನ ನೀಡ​ಲಾ​ಗಿದೆ. ಈ ಎಲ್ಲರೂ ಗುರು​ವಾರ ಸಂಜೆಯ ವೇಳೆಗೆ ದೆಹಲಿ ತಲು​ಪ​ಲಿ​ದ್ದಾರೆ. ಇವರಿಗೆ ಊಟೋ​ಪ​ಚಾರ, ವಸತಿ ಸೇರಿ​ದಂತೆ ಅಗತ್ಯ ಸೌಕರ್ಯ ಕಲ್ಪಿ​ಸಲು ಕೆಪಿ​ಸಿ​ಸಿಯು ದೆಹಲಿ ಕರ್ನಾ​ಟಕ ಭವ​ನ​ದಲ್ಲಿ ಕ್ಯಾಂಪ್‌ ಕಚೇ​ರಿ​ಯನ್ನು ತೆರೆ​ಯ​ಲಿದೆ ಎಂದು ಕೆಪಿ​ಸಿಸಿ ಮಾಧ್ಯಮ ಸಂಚಾ​ಲ​ಕ​ ದಿನೇಶ್‌ ಗೂಳಿ​ಗೌಡ ತಿಳಿ​ಸಿ​ದ್ದಾ​ರೆ.

ಬೆಂಗಳೂರಲ್ಲಿಲ್ಲ ಅಧಿವೇಶನ:

ಕಾಂಗ್ರೆಸ್‌ ಅಧಿಕಾರದಲ್ಲಿರುವ ಅತಿ ದೊಡ್ಡ ರಾಜ್ಯವಾದ ಕರ್ನಾಟಕದಲ್ಲಿ ಈ ಬಾರಿಯ ಮಹಾ ಅಧಿವೇಶನ ನಡೆಯಲಿದೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ವತಿಯಿಂದ ಎಐಸಿಸಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು. ಆದರೆ ಹೈಕಮಾಂಡ್‌ ದೆಹಲಿಯಲ್ಲೇ ನಡೆಸಲು ನಿರ್ಧರಿಸಿದ್ದು, ಹೀಗಾಗಿ ಬೆಂಗಳೂರಿನಲ್ಲಿ ಮಹಾ ಅಧಿವೇಶನ ನಡೆಯಲಿದೆ ಎಂಬ ಕಾರ್ಯಕರ್ತರ ನಿರೀಕ್ಷೆ ಹುಸಿಯಾಗಿದೆ.

ವಿದ್ಯಾರ್ಥಿ ಭವನದಲ್ಲಿ ಸಿಎಂ ದೋಸೆ ಪಾರ್ಟಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಗಾಂಧೀ ಬಜಾರಿನ ವಿದ್ಯಾರ್ಥಿ ಭವನಕ್ಕೆ ತೆರಳಿ ದೋಸೆ ಸವಿದರು. ಮುಖ್ಯಮಂತ್ರಿಗಳ ಜತೆ ಸಚಿವ ಕೆ.ಜೆ. ಜಾಜ್‌ರ್‍, ಸಿಎಂ ಅವರ ಆಪ್ತ ಗೋವಿಂದರಾಜ್‌, ಕೆ.ಆರ್‌. ಪುರ ಶಾಸಕ ಬೈರತಿ ಬಸವರಾಜ್‌ ಇದ್ದರು. ಉತ್ತರಪ್ರದೇಶದಲ್ಲಿ ಬಿಜೆಪಿ ಸೋಲು ಅನುಭವಿಸಿದ ಕಾರಣ ಸಿಎಂ ಖುಷಿಯ ಮೂಡ್‌ನಲ್ಲಿ ಇದ್ದಂತೆ ಕಂಡುಬಂತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ಕಾರವಾರಕ್ಕೆ ಸೀಗಲ್‌ ಹಕ್ಕಿ ಕಳಿಸಿ ಚೀನಾ ಬೇಹುಗಾರಿಕೆ?