
ಬೆಂಗಳೂರು (ನ. 11): ಸಚಿವ ಜಮೀರ್ ಅಹಮದ್ ಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರೇ ಸಾಥ್ ನೀಡುತ್ತಿಲ್ಲ. ಟಿಪ್ಪು ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಮುಸ್ಲಿಂ ನಾಯಕರ ಭಿನ್ನಮತ ಹೊರಬಿದ್ದಿದೆ.
ಟಿಪ್ಪು ಜಯಂತಿಗೆ ಜಮೀರ್ ಆಹ್ವಾನಕ್ಕೆ ಕಾಂಗ್ರೆಸ್ ಮುಸ್ಲಿಂ ಮುಖಂಡರು ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ಟಿಪ್ಪು ಜಯಂತಿಯಲ್ಲಿ ಜಮೀರ್ ಅಹಮದ್ ನನ್ನು ಅಲ್ಪಸಂಖ್ಯಾತ ನಾಯಕರು ಒಂಟಿಯಾಗಿಸಿದ್ದಾರೆ. ಮಾಜಿ ಸಚಿವ ತನ್ವೀರ್ ಸೇಠ್, ಸಿ.ಎಂ ಇಬ್ರಾಹಿಂ, ಸಚಿವ ಯು.ಟಿ ಖಾದರ್ ಟಿಪ್ಪು ಜಯಂತಿಗೆ ಗೈರಾಗಿ ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಹಿರಿಯ ನಾಯಕ ಜಾಫರ್ ಶರೀಫ್ ರೆಹಮಾನ್ ಖಾನ್, ಜಾಫರ್ ಶರೀಫ್, ರೆಹಮಾನ್ ಖಾನ್ ಆಹ್ವಾನ ನೀಡಿದರೂ ಆಗಮಿಸಿಲ್ಲ. ಜಮೀರ್ ವಿರುದ್ಧ ಕಾಂಗ್ರೆಸ್ ಮುಸ್ಲಿಂ ನಾಯಕರ ಅಸಮಾಧಾನ ಕಂಡು ಕೈ ನಾಯಕರಿಗೆ ಟೆನ್ಷನ್ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.