
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ಸಮಾರಂಭವೊಂದರಲ್ಲಿ ಕಣ್ಣೀರು ಹಾಕಿ ‘ತಾವು ವಿಷಕಂಠ’ ಎಂದು ಹೇಳಿದ ವಿಷಯ ಲೋಕಸಭೆಯಲ್ಲಿ ಬುಧವಾರ ಪ್ರಸ್ತಾಪವಾಗಿ ಕರ್ನಾಟಕದ ಬಿಜೆಪಿ ಸಂಸದರು ಹಾಗೂ ಕಾಂಗ್ರೆಸ್ ಸಂಸದರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
ಬರಗಾಲ ಕುರಿತ ಚರ್ಚೆಯಲ್ಲಿ ಮಾತನಾಡಿದ ಮೈಸೂರು-ಕೊಡಗು ಸಂಸದ ಪ್ರತಾಪ್ಸಿಂಹ, ‘ಕರ್ನಾಟಕ ಮುಖ್ಯಮಂತ್ರಿಗಳು ತಾವು ವಿಷ ಕುಡಿಯುತ್ತಿದ್ದೇವೆ ಎಂದು ಹೇಳಿದ್ದಾರೆ. ಅಧಿಕಾರದಲ್ಲಿ ಉಳಿಯಲು ತಾವು ಹೀಗೆ ಮಾಡುತ್ತಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಹೆಚ್ಚಿನ ಅಧಿಕಾರಕ್ಕೆ ಹಾಗೂ ಸರ್ಕಾರದ ಮೇಲೆ ನಿಯಂತ್ರಣ ಸಾಧಿಸುವುದಕ್ಕೆ ವಿಷ ಉಣಿಸುತ್ತಿದೆ’ ಎಂದರು.
ಪ್ರತಾಪ್ ಈ ಹೇಳಿಕೆ ನೀಡುತ್ತಿದ್ದಂತೆಯೇ ಕರ್ನಾಟಕದ ಕಾಂಗ್ರೆಸ್ ಸಂಸದರು ಹಾಗೂ ಇತರರು ಎದ್ದು ನಿಂತು ಪ್ರತಿಭಟನೆ ವ್ಯಕ್ತಪಡಿಸಿದರು. ಆಗ ಮಧ್ಯಪ್ರವೇಶಿಸಿದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ‘ಪ್ರತಾಪ್ ಅವರು ಯುವ ಸಂಸದರು. ಅವರು ಲೋಕಸಭೆಯಲ್ಲಿ ಮಾತನಾಡುವುದು ಅಪರೂಪ. ಮಾತಾಡಲು ಬಿಡಿ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.