ಜೆಡಿಎಸ್ ತೊರೆದವರಿಗೆ ಈಗ ಕಾಂಗ್ರೆಸ್ ಬಗ್ಗೆ ಅಸಮಾಧಾನ

Published : Oct 23, 2018, 09:54 AM IST
ಜೆಡಿಎಸ್ ತೊರೆದವರಿಗೆ ಈಗ ಕಾಂಗ್ರೆಸ್ ಬಗ್ಗೆ ಅಸಮಾಧಾನ

ಸಾರಾಂಶ

ಕಾಂಗ್ರೆಸ್ ಮುಖಂಡರು, ಜೆಡಿಎಸ್ ಜತೆ ಹೋರಾಟ ಮಾಡಿಕೊಂಡು ಬಂದಿದ್ದು, ತಾವು ಪಕ್ಷದ ತೀರ್ಮಾನದ ಪ್ರಕಾರ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚಿಸಬೇಕೆ ಅಥವಾ ಬೇಡವೇ ಎಂಬುದರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ. 

ಬೆಂಗಳೂರು : ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಂಡ್ಯ, ರಾಮನಗರ ಹಾಗೂ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕರು ಚಲುವರಾಯಸ್ವಾಮಿ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಸೋಮವಾರ ನಗರದ ಶಾಂಘ್ರಿಲಾ ಹೋಟೆಲ್‌ನಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು, ಜೆಡಿಎಸ್ ಜತೆ ಹೋರಾಟ ಮಾಡಿಕೊಂಡು ಬಂದ ತಾವು ಪಕ್ಷದ ತೀರ್ಮಾನದ ಪ್ರಕಾರ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಸಭೆ ನಡೆಸಿದರು. ಈ ವೇಳೆ ಪಕ್ಷದ ತೀರ್ಮಾನಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ಆಗುವ ಅನ್ಯಾಯವನ್ನು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮುಂದಿಡಬೇಕು ಎಂದು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. 

ಮುಖಂಡರ ಅಸಮಧಾನ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಗಡಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ನನ್ನನ್ನು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಯಾರೂ ಕರೆದಿಲ್ಲ. ಕರೆದರೆ ತಾನೇ ಹೋಗುವುದು. ಅವರಿಗೆ ಬೇಡ ಎಂದರೆ ನಾನಾಗಿ ನಾನು ಏಕೆ ಹೋಗಲಿ ಎಂದು ಪ್ರಶ್ನಿಸಿದರು. ಅಲ್ಲದೆ ಜೆಡಿಎಸ್ ಪರ ಪ್ರಚಾರ ಮಾಡಲು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರೇ ಸಾಕು. ನಾವೆಲ್ಲಾ ಅಗತ್ಯವೇ ಇಲ್ಲ. ನೀವು ಇದನ್ನು ಹೇಗೆ ಬೇಕಾದರೂ ಅರ್ಥೈಸಿಕೊಳ್ಳಬಹುದು ಎಂದು ಪರೋಕ್ಷವಾಗಿ ಜೆಡಿಎಸ್ ಬಗೆಗಿನ ಅಸಮಧಾನ ಹೊರಹಾಕಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Share Market App Scam: ಷೇರುಪೇಟೆಯಲ್ಲಿ ಹೂಡಿಕೆ ನೆಪದಲ್ಲಿ ಉದ್ಯಮಿಗೆ ₹8.3 ಕೋಟಿ ಧೋಖಾ!
indigo flight: ದೆಹಲಿ ಇಂಡಿಗೋ ವಿಳಂಬದಿಂದಾಗಿ ಸದನಕ್ಕೆ ತಡವಾಗಿ ಬಂದ ಸಚಿವರು!