ರಾಜಸ್ಥಾನ ಸಿಎಂ ಕುರ್ಚಿ ಗಡಗಡ? ಸಚಿವರು ಶಾಸಕರಿಂದಲೇ ಕ್ರಮಕ್ಕೆ ಆಗ್ರಹ

Published : May 28, 2019, 11:15 AM IST
ರಾಜಸ್ಥಾನ ಸಿಎಂ ಕುರ್ಚಿ ಗಡಗಡ? ಸಚಿವರು ಶಾಸಕರಿಂದಲೇ ಕ್ರಮಕ್ಕೆ ಆಗ್ರಹ

ಸಾರಾಂಶ

ಕೆಲ ತಿಂಗಳ ಹಿಂದಷ್ಟೇ ಅಧಿಕಾರ ಸ್ವೀಕಾರ ಮಾಡಿದ್ದ ರಾಜಸ್ಥಾನ ಸಿಎಂ ಗೆಹ್ಲೋಟ್ ಕುರ್ಚಿ ಇದೀಗ ನಡುಗುತ್ತಿದೆ. 

ಜೈಪುರ/ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಪಕ್ಷಕ್ಕಿಂತ ಪುತ್ರನ ಹಿತವೇ ಮುಖ್ಯವಾಯಿತು ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದೇ ತಡ, ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಮಾಡಿದ್ದರ ಹೊಣೆಗಾರಿಕೆಯನ್ನು ನಿಗದಿಗೊಳಿಸಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಸಚಿವರು ಹಾಗೂ ಶಾಸಕರು ಬಹಿರಂಗವಾಗಿಯೇ ಆಗ್ರಹಿಸತೊಡಗಿದ್ದಾರೆ. ಅವರೆಲ್ಲರ ಗುರಿ ಅಶೋಕ್‌ ಗೆಹ್ಲೋಟ್‌ ಆಗಿದ್ದಾರೆ ಎಂಬುದು ಸ್ಪಷ್ಟ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜಸ್ಥಾನದಾದ್ಯಂತ 130 ರಾರ‍ಯಲಿಗಳಲ್ಲಿ ಗೆಹ್ಲೋಟ್‌ ಪಾಲ್ಗೊಂಡಿದ್ದರು. ಆ ಪೈಕಿ 93 ಸಮಾವೇಶಗಳು ಅವರ ಪುತ್ರ ವೈಭವ್‌ ಸ್ಪರ್ಧಿಸಿದ್ದ ಜೋಧ್‌ಪುರ ಕ್ಷೇತ್ರದಲ್ಲೇ ನಡೆದಿದ್ದವು. ಹೀಗಾಗಿ ರಾಜಸ್ಥಾನದಲ್ಲಿ ಅಧಿಕಾರದಲ್ಲಿದ್ದರೂ ಒಂದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲಲಿಲ್ಲ ಎಂಬುದು ಕಾಂಗ್ರೆಸ್ಸಿಗರ ಆಕ್ರೋಶ.

ರಾಹುಲ್‌ ಗಾಂಧಿ ಟೀಕೆ ಬೆನ್ನಲ್ಲೇ ರಾಜಸ್ಥಾನದ ಸಚಿವರುಗಳು ಸೋಲಿನ ಹೊಣೆಗಾರಿಕೆಯನ್ನು ನಿಗದಿಗೊಳಿಸಬೇಕು ಎಂಬ ಹಕ್ಕೊತ್ತಾಯ ಮಾಡಿದ್ದಾರೆ. ಇದರಿಂದ ಪಕ್ಷದಲ್ಲಿ ಗೆಹ್ಲೋಟ್‌ ತಲೆದಂಡಕ್ಕೆ ಒತ್ತಡ ನಿರ್ಮಾಣವಾಗಲು ವೇದಿಕೆಯಾದಂತಾಗಿದೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು