
ನವದೆಹಲಿ[ಆ.: ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ಅವರ ರಾಜೀನಾಮೆಯ ಬಳಿಕ ಪರ್ಯಾಯ ನಾಯಕನ ಆಯ್ಕೆ ವಿಳಂಬ ಆಗುತ್ತಿರುವುದಕ್ಕೆ ಪಕ್ಷದ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿರುವ ಬೆನ್ನಲ್ಲೇ, ಈ ವಾರ ಕಾಂಗ್ರೆಸ್ಗೆ ಹಂಗಾಮಿ ಅಧ್ಯಕ್ಷರೊಬ್ಬರು ನೇಮಕಗೊಳ್ಳುವ ಸಾಧ್ಯತೆ ಇದೆ.
"
ತಮ್ಮ ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಹುದ್ದೆಗೆ ಪರ್ಯಾಯ ನಾಯಕರನ್ನು ಆಯ್ಕೆ ತ್ವರಿತ ನಿರ್ಧಾರ ಕೈಗೊಳ್ಳುವ ಬಗ್ಗೆ ರಾಹುಲ್ ಗಾಂಧಿ, ಮಂಗಳವಾರ ಸುಳಿವು ನೀಡಿದ್ದಾರೆ. ಆದರೆ, ತಮ್ಮ ಸೋದರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕುಟುಂಬದ ಸದಸ್ಯರಲ್ಲಿ ಒಬ್ಬರನ್ನು ಅಧ್ಯಕ್ಷ ಹುದ್ದೆಗೆ ನೇಮಿಸುವುದನ್ನು ರಾಹುಲ್ ಗಾಂಧಿ ತಳ್ಳಿಹಾಕಿದ್ದಾರೆ.
ಹಿರಿಯ ನಾಯಕರಾದ ಅಮರೀಂದರ್ ಸಿಂಗ್, ಕರಣ್ ಸಿಂಗ್ ಮತ್ತು ಶಶಿ ತರೂರ್, ಲೋಕಸಭೆ ಚುನಾವಣೆಯ ವೇಳೆ ಪ್ರಭಾವ ಗಮನ ಸೆಳೆದಿದ್ದು, ಅಧ್ಯಕ್ಷ ಹುದ್ದೆಯ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹಂಗಾಮಿ ಅಧ್ಯಕ್ಷರ ಹುದ್ದೆಗೆ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ಜ್ಯೋತಿರಾದಿತ್ಯ ಸಿಂಧಿಯಾ, ಸುಶಿಲ್ ಕುಮಾರ್ ಸಿಂಧೆ, ಕೆ.ಸಿ. ವೇಣುಗೋಪಾಲ್ ಅವರ ಹೆಸರು ಕೇಳಿಬಂದಿದೆ.
ಈ ವಾರ ಹಂಗಾಮಿ ಅಧ್ಯಕ್ಷರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಪಕ್ಷದ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದು ಸಿಡಬ್ಲ್ಯುಸಿ ಸಭೆಯಲ್ಲಿ ಅಧಿಕೃತವಾಗಿ ಹೆಸರನ್ನು ಘೋಷಿಸುವುದಕ್ಕಿಂತಲೂ ಮುನ್ನ ಇದು ಮೊದಲ ಹೆಜ್ಜೆಯಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.