ಕಾಂಗ್ರೆಸ್ಸಿಗೆ ಇಂದು ಹೊಸ ಅಧ್ಯಕ್ಷ: ಕನ್ನಡಿಗನಿಗೆ ಸಿಗುತ್ತಾ ಅವಕಾಶ?

Published : Aug 10, 2019, 08:30 AM IST
ಕಾಂಗ್ರೆಸ್ಸಿಗೆ ಇಂದು ಹೊಸ ಅಧ್ಯಕ್ಷ: ಕನ್ನಡಿಗನಿಗೆ ಸಿಗುತ್ತಾ ಅವಕಾಶ?

ಸಾರಾಂಶ

ಕಾಂಗ್ರೆಸ್ಸಿಗೆ ಇಂದು ಹೊಸ ಅಧ್ಯಕ್ಷ| ಬೆಳಗ್ಗೆ 11ಕ್ಕೆ ಸಿಡಬ್ಲ್ಯುಸಿ ಸಭೆ| ಕನ್ನಡಿಗನಿಗೆ ಸಿಗುತ್ತಾ ಅವಕಾಶ?| ರಾಹುಲ್‌ ರಾಜೀನಾಮೆಯಿಂದ 2.5 ತಿಂಗಳಿಂದ ಹುದ್ದೆ ಖಾಲಿ

ನವದೆಹಲಿ[ಆ.10]: ರಾಹುಲ್‌ ಗಾಂಧಿ ರಾಜೀನಾಮೆಯಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಖಾಲಿ ಇರುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯುವ ನಿರೀಕ್ಷೆ ಇದೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುಶೀಲ್‌ ಕುಮಾರ್‌ ಶಿಂಧೆ, ಮುಕುಲ್‌ ವಾಸ್ನಿಕ್‌ ಹಾಗೂ ಕಿರಿಯ ನಾಯಕರಾದ ಜ್ಯೋತಿರಾದಿತ್ಯ ಸಿಂಧಿಯಾ, ಸಚಿನ್‌ ಪೈಲಟ್‌ ಪೈಕಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಕೆರಳಿಸಿದೆ. ಇವರಲ್ಲದೆ ಅಚ್ಚರಿಯ ನಾಯಕನನ್ನೇನಾದರೂ ಕಾಂಗ್ರೆಸ್‌ ಆಯ್ಕೆ ಮಾಡುತ್ತಾ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬೆಳಗ್ಗೆ 11ಕ್ಕೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ಸಿನ ಪರಮೋಚ್ಚ ನೀತಿ ನಿರೂಪಣಾ ಸಮಿತಿಯಾದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದೆ. ನೂತನ ನಾಯಕನ ಆಯ್ಕೆಯೇ ಈ ಸಭೆಯ ಅಜೆಂಡಾ ಎಂದು ಹೇಳಲಾಗಿದೆ. ಆದರೆ ಕಾಂಗ್ರೆಸ್‌ ಪೂರ್ಣಾವಧಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತದೋ ಅಥವಾ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡುತ್ತದೋ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಮೇ 25ರಂದು ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ರಾಹುಲ್‌ ಗಾಂಧಿ ಅವರು ರಾಜೀನಾಮೆ ಪ್ರಕಟಿಸಿದ್ದರು. ಪಕ್ಷದ ನಾಯಕರು ರಾಹುಲ್‌ ಅವರನ್ನು ಮನವೊಲಿಸುವ ಪ್ರಯತ್ನಗಳು ವಿಫಲವಾಗಿದ್ದವು. ಕೆಲವು ದಿನಗಳ ಬಳಿಕ ರಾಹುಲ್‌ ಅವರು 4 ಪುಟಗಳ ರಾಜೀನಾಮೆ ಪತ್ರವನ್ನು ಟ್ವೀಟ್‌ ಮಾಡಿದ್ದರು. ರಾಹುಲ್‌ ರಾಜೀನಾಮೆ ನಂತರ ಖರ್ಗೆ ಸೇರಿ ಹಲವು ನಾಯಕರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿತ್ತು. ಈ ನಡುವೆ ಯುವ ನಾಯಕರಿಗೆ ಮಣೆ ಹಾಕಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು. ಹೀಗಾಗಿ ಹಿರಿಯ ಹಾಗೂ ಕಿರಿಯ ನಾಯಕರ ಪೈಕಿ ಯಾರಿಗೆ ಕಾಂಗ್ರೆಸ್‌ ಅವಕಾಶ ನೀಡಲಿದೆ ಎಂದು ನೋಡಬೇಕಾಗಿದೆ.

ಈ ಮಧ್ಯೆ, ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆಯಲ್ಲಿ ಇನ್ನು ಅಲ್ಪ ವಿಳಂಬವೂ ಆಗಬಾರದು ಎಂದು ಪಕ್ಷದ ನಾಯಕ ಅಭಿಷೇಕ್‌ ಮನು ಸಿಂಘ್ವಿ ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು