
ನವದೆಹಲಿ[ಮೇ.27]: ಈ ಬಾರಿ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷ ಮತ್ತು ವಿಪಕ್ಷ ನಾಯಕ ಪಟ್ಟದಕ್ಷಿಣ ಭಾರತಕ್ಕೆ ಒಲಿಯುವ ಸಾಧ್ಯತೆ ಇದೆ. ಅಧಿಕೃತ ವಿಪಕ್ಷ ಸ್ಥಾನಮಾನ ಪಡೆಯಲು ಅಗತ್ಯವಾದ 55 ಸ್ಥಾನಗಳನ್ನು ಕಾಂಗ್ರೆಸ್ ಪಡೆದಿಲ್ಲ. ಆದರೂ ಕಳೆದ ಬಾರಿಯಂತೆ ಈ ಬಾರಿಯೂ ವಿಪಕ್ಷಗಳನ್ನು ತಮ್ಮ ನಾಯಕರೊಬ್ಬರನ್ನು ಆಯ್ಕೆ ಮಾಡಿಕೊಳ್ಳಲಿವೆ.
ಸಹಜವಾಗಿಯೇ ಈ ಸ್ಥಾನ ಬಿಜೆಪಿ ನಂತರದಲ್ಲಿ ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ಗೆ ಒಲಿಯಲಿದೆ.ಆದರೆ ವಿಪಕ್ಷ ನಾಯಕತ್ವ ಹೊಣೆ ವಹಿಸಿಕೊಳ್ಳಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಎನ್ನಲಾಗಿದೆ.
ಹಾಲಿ ರಾಜ್ಯಸಭೆಯಲ್ಲಿನ ವಿಪಕ್ಷ ನಾಯಕರಾಗಿ ಉತ್ತರ ಭಾರತದವರಾದ ಕಾಂಗ್ರೆಸ್ನ ಗುಲಾಂ ನಬಿ ಆಜಾದ್ ಇದ್ದಾರೆ. ಹೀಗಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕತ್ವ ದಕ್ಷಿಣ ಭಾರತಕ್ಕೆ ನೀಡುವ ಸಾಧ್ಯತೆ ಇದೆ.
ಕಳೆದ ಬಾರಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಈ ಹೊಣೆ ಹೊತ್ತುಕೊಂಡಿದ್ದರು. ಈ ಬಾರಿ ಖರ್ಗೆ ಸೋಲನ್ನಪ್ಪಿದ್ದು, ಕಾಂಗ್ರೆಸ್ಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ಈ ರೇಸ್ನಲ್ಲಿ ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಸಂಸದ ಶಶಿ ತರೂರ್, ಮಾವೆಲಿಕ್ಕರಾ ಕ್ಷೇತ್ರದಿಂದ ಸತತ 7ನೇ ಬಾರಿಗೆ ಆಯ್ಕೆಯಾದ ಸಂಸದ ಸುರೇಶ್ ಕೊಡಿಕುನ್ನಿಲ್ ಹಾಗೂ ಕೇರಳದ ಮಾಜಿ ಸಿಎಂ ಕರುಣಾಕರನ್ ಅವರ ಪುತ್ರ ಹಾಗೂ ಇದೀಗ ನಾಲ್ಕನೇ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಕೆ. ಮುರಳೀಧರನ್ ಹೆಸರುಗಳು ಮುಂಚೂಣಿಯಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.