ಅತ್ತ ದೆಹಲಿಯಲ್ಲಿ ಬಿಎಸ್‌ವೈ, ಇತ್ತ ಬಿಜೆಪಿ ಶಾಸಕನ ಮನೆಯಲ್ಲಿ ಕೈ ನಾಯಕರ ಊಟ

Published : Jan 08, 2019, 07:45 PM ISTUpdated : Jan 08, 2019, 07:54 PM IST
ಅತ್ತ ದೆಹಲಿಯಲ್ಲಿ ಬಿಎಸ್‌ವೈ, ಇತ್ತ ಬಿಜೆಪಿ ಶಾಸಕನ ಮನೆಯಲ್ಲಿ ಕೈ ನಾಯಕರ ಊಟ

ಸಾರಾಂಶ

ಒಂದು ಕಡೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದರೆ ಇತ್ತ ರಾಜ್ಯದಲ್ಲಿಯೂ ಗೊತ್ತಿಲ್ಲದ ಬೆಳವಣಿಗೆ ನಡೆಯುತ್ತಿದೆ.

ಬಾಗಲಕೋಟೆ[ಜ.07] ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕ, ಶಾಸಕ ಮುರುಗೇಶ್ ನಿರಾಣಿ ಮನೆಯಲ್ಲಿ ಊಟ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನ ಹುಟ್ಟುಹಾಕಿದೆ.

ಬೀಳಗಿ ಪಟ್ಟಣದ ಮಾಜಿ ಸಚಿವ ಮುರುಗೇಶ ನಿರಾಣಿ ಮನೆಯಲ್ಲಿ  ಕಾಂಗ್ರೆಸ್ ನಾಯಕರು ಊಟ ಮಾಡಿರುವುದು ನಿಧಾನಕ್ಕೆ ರಾಜಕಾರಣದ ಬಣ್ಣಕ್ಕೆ ತಿರುಗುತ್ತಿದೆ. ಸಚಿವ ಆರ್.ವಿ‌.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಬೀಳಗಿ ತಾಲೂಕಿಗೆ ಭೇಟಿ ನೀಡಿತ್ತು. ಭೇಟಿ  ವೇಳೆ ಸಚಿವರಾದ ಆರ್.ವಿ‌.ದೇಶಪಾಂಡೆ, ಆರ್.ಬಿ.ತಿಮ್ಮಾಪೂರ, ಶಿವಾನಂದ ಪಾಟೀಲ ಸೇರಿದಂತೆ ಹಲವರು ಊಟಕ್ಕೆ ಆಗಮಿಸಿದ್ದರು.

ಲೋಕ ಚುನಾವಣಾ ಬೆನ್ನಲ್ಲೇ ಬಿಜೆಪಿ ಮೈತ್ರಿಗೆ ಮತ್ತೊಂದು ಪಕ್ಷ ಕೋಕ್?

ಈ ವೇಳೆ ಕಾಂಗ್ರೆಸ್ ಮುಖಂಡರು ನಿರಾಣಿ ಮನೆಗೆ ತೆರಳಿ ಊಟ ಮಾಡಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸಚಿವ ದೇಶಪಾಂಡೆ ಈ ವಿಚಾರದ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?