
ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಸಂಬಂಧಿ ಮತ್ತು ಹಾಲಿ ಶಾಸಕಿ ಆಶಾ ಕುಮಾರಿ ಅವರು ತಮ್ಮ ಕಪಾಳಕ್ಕೆ ಹೊಡೆದಿದ್ದರಿಂದ ಕುಪಿತಳಾದ ಮಹಿಳಾ ಪೊಲೀಸ್ ಪೇದೆಯೊಬ್ಬರು, ಶಾಸಕಿಗೆ 2 ಬಾರಿ ಕಪಾಳ ಮೋಕ್ಷ ಮಾಡಿ ಸೇಡು ತೀರಿಸಿಕೊಂಡ ಘಟನೆ ರಾಜ್ಯ ಕಾಂಗ್ರೆಸ್ ಕಚೇರಿ ಮುಂದೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವೇನು ಎಂಬುದರ ಕುರಿತು ಪರಾಜಿತ ಶಾಸಕರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸುತ್ತಿದ್ದರು.
ಅಜ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಶಾಸಕಿ ಆಶಾ ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಇದರಿಂದ ಕ್ರೋಧ ಗೊಂಡ ಆಶಾ, ಮಹಿಳಾ ಪೊಲೀಸ್ ಪೇದೆಯ ಕಪಾಳಕ್ಕೆ ಬಾರಿಸಿದರು. ಈ ವೇಳೆ ಕೊಂಚವೂ ದಿಗಿಲು ಗೊಳ್ಳದ ಪೇದೆ, ಶಾಸಕಿಯ ಕಪಾಳಕ್ಕೆ ತಿರುಗಿಸಿ ಎರಡೇಟು ಹೊಡೆದರು. ಆಶಾ ವರ್ತನೆಯನ್ನು ಬಳಿಕ ರಾಹುಲ್ ಕೂಡ ಖಂಡಿಸಿ ತರಾಟೆಗೆ ತೆಗೆದುಕೊಂಡರೆನ್ನಲಾಗಿದೆ. ಸದ್ಯ ಬಡಿದಾಡಿಕೊಂಡ ಶಾಸಕಿ ಹಾಗೂ ಪೊಲೀಸ್ ಪೇದೆ ಮೇಲೂ ಎಫ್ಐಆರ್ ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.