ಅತೃಪ್ತಿ ಶಮನಕ್ಕೆ ಕಾಂಗ್ರೆಸ್ ತಂತ್ರ, ಬಿ.ಸಿ.ಪಾಟೀಲ್ ಪುತ್ರಿಗೆ ದೊಡ್ಡ ಗಿಫ್ಟ್?

Published : Mar 07, 2019, 04:30 PM ISTUpdated : Mar 11, 2019, 11:50 AM IST
ಅತೃಪ್ತಿ ಶಮನಕ್ಕೆ ಕಾಂಗ್ರೆಸ್ ತಂತ್ರ, ಬಿ.ಸಿ.ಪಾಟೀಲ್ ಪುತ್ರಿಗೆ ದೊಡ್ಡ ಗಿಫ್ಟ್?

ಸಾರಾಂಶ

ಕಾಂಗ್ರೆಸ್ ರೆಬಲ್ ಶಾಸಕರನ್ನು ಮತ್ತಷ್ಟು ತಣ್ಣಗಾಗಿಸಲು ಕೈ ಪಡೆ ಮಾಸ್ಟರ್ ಪ್ಲಾನ್ ಮಾಡಿದೆಯೇ? ಸದ್ಯದ ರಾಜಕಾರಣದ ಬೆಳವಣಿಗೆ ಅಂಥದ್ದೊಂದು ಸಾಧ್ಯತೆಯನ್ನು ಎತ್ತಿದೆ.

ಹಾವೇರಿ(ಮಾ. 07)  ಶಾಸಕ ಬಿಸಿ ಪಾಟೀಲ್  ಪುತ್ರಿಗೆ   ಹಾವೇರಿ ಲೋಕ ಕ್ಷೇತ್ರ "ಕೈ"ಟಿಕೆಟ್ ಸಿಗಲಿದೆಯೇ? ಎಂಬ ಪ್ರಶ್ನೆಗೆ ಒಂದೊಂದೆ ಉತ್ತರಗಳು ಸಿಗುತ್ತಲಿವೆ.

ಸಚಿವ ಸ್ಥಾನ ನೀಡದ ಹಿನ್ನೆಲೆ ಅಸಮಾಧಾನಗೊಂಡಿದ್ದ ಬಿ.ಸಿ.ಪಾಟೀಲರನ್ನು ತಣ್ಣಗಾಗಿಸಲು  ಟಿಕೆಟ್ ನೀಡಲು ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ.  ಬಿ.ಸಿ.ಪಾಟೀಲ್ ಪುತ್ರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಪಕ್ಕಾ ಎನ್ನಲಾಗಿದೆ. 

ಬಿಜೆಪಿ ಪರ ಸುಮಲತಾ ಒಲವು? ಬಿಎಸ್‌ವೈ ಹೇಳೋದೇನು?

ಪುತ್ರಿಗೆ ಟಿಕೆಟ್ ನೀಡುವಂತೆ ಶಾಸಕ ಬಿ.ಸಿ.ಪಾಟೀಲ್ ಬೇಡಿಕೆ ಇಟ್ಟಿದ್ದಾರೆ.  ಹೈಕಮಾಂಡ್ ಗೆ ಈಗಾಗಲೇ ಮನವಿ ಸಲ್ಲಿಸಿರೋ ಕೌರವ ಮಗಳು ಸೃಷ್ಟಿ ಪಾಟೀಲ್ ಗೆ ಟಿಕೆಟ್ ಕೇಳಿದ್ದಾರೆ. ಸೃಷ್ಟಿ ಪಾಟೀಲ್  ಸೇರಿ  5  ಜನ ವೀರಶೈವ ಆಕಾಂಕ್ಷಿಗಳ ಲಿಸ್ಟ್ ಸಲ್ಲಿಕೆಯಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಲಿಸ್ಟ್ ಸಲ್ಲಿಸಿರೋ ಪಾಟೀಲ್   ಹಿರೇಕೆರೂರು ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಪುತ್ರಿ ಸಹ ಸಭೆಯಲ್ಲಿ ಪಾಲ್ಗೊಂಡಿದ್ದು ಮುಂದಿನ ಬೆಳವಣಿಗಗಳ ಬಗ್ಗೆ ಚರ್ಚೆ ಮಾಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ