ಮಾಜಿ ಸಚಿವ ಗಣಿ ದಣಿ ಜನಾರ್ದನ ರೆಡ್ಡಿ ಅವರನ್ನು ಕಾಂಗ್ರೆಸ್ ಶಾಸಕರೋರ್ವರು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಈ ವಿಚಾರಕ್ಕೆ ಇದೀಗ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು : ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ಡಾ. ಸುಧಾಕರ್ ಅವರು ಬೆನ್ನುಹುರಿ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ.
ಸುಧಾಕರ್ ಅವರು ಸೋಮವಾರ ಜಿಂದಾಲ್ನಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು ಎಂಬ ವದಂತಿಗಳಿದ್ದವು.
ಆದರೆ ಈ ವದಂತಿಯನ್ನು ಅಲ್ಲಗಳೆದಿರುವ ಸುಧಾಕರ್ ಅವರು ಬೆನ್ನುಹುರಿ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ತಾವು ಜಿಂದಾಲ್ಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಯಾರನ್ನೂ ಭೇಟಿಯಾಗಿಲ್ಲ. ನಾನು ರೆಡ್ಡಿ ಅವರನ್ನು ಭೇಟಿಯಾಗಿದ್ದೇನೆ ಎಂಬುದು ಅಪ್ಪಟ ಸುಳ್ಳು ಎಂದು ಸ್ಪಷ್ಟಪಡಿಸಿದರು.