ಕಾಂಗ್ರೆಸ್’ಗೆ ಬೈ ಹೇಳಲು ಗುತ್ತೇದಾರ್ ಸಿದ್ಧತೆ; ಸಿಎಂ ಮನವಿಗೂ ಕ್ಯಾರೇ ಎನ್ನದೇ ಖಡಕ್ ತಿರುಗೇಟು

Published : Mar 29, 2018, 12:17 PM ISTUpdated : Apr 11, 2018, 01:09 PM IST
ಕಾಂಗ್ರೆಸ್’ಗೆ ಬೈ ಹೇಳಲು ಗುತ್ತೇದಾರ್ ಸಿದ್ಧತೆ; ಸಿಎಂ ಮನವಿಗೂ ಕ್ಯಾರೇ ಎನ್ನದೇ ಖಡಕ್ ತಿರುಗೇಟು

ಸಾರಾಂಶ

ಕಾಂಗ್ರೆಸ್ ವಿರುದ್ಧ  ಗುತ್ತೇದಾರ್ ಸಿಡಿದೆದ್ದಿದ್ದು  ಕಾಂಗ್ರೆಸ್’ಗೆ  ಬೈಬೈ ಹೇಳಲು  ಸಿದ್ಧತೆ ನಡೆಸಿದ್ದಾರೆ.  ಇಂದು CM ಸಿದ್ದರಾಮಯ್ಯ ಭೇಟಿಯಾಗಿ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು (ಮಾ. 29): ಕಾಂಗ್ರೆಸ್ ವಿರುದ್ಧ  ಗುತ್ತೇದಾರ್ ಸಿಡಿದೆದ್ದಿದ್ದು  ಕಾಂಗ್ರೆಸ್’ಗೆ  ಬೈಬೈ ಹೇಳಲು  ಸಿದ್ಧತೆ ನಡೆಸಿದ್ದಾರೆ.  ಇಂದು CM ಸಿದ್ದರಾಮಯ್ಯ ಭೇಟಿಯಾಗಿ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಸಿದ್ದರಾಮಯ್ಯ ಮಾತಿಗೆ ಗೌರವ ಕೊಟ್ಟು ಈವರೆಗೂ ಕಾಂಗ್ರೆಸ್’ನಲ್ಲಿ  ಕೆಲಸ ಮಾಡಿದ್ದೇನೆ.  ಸೂಕ್ತ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ತ್ಯಜಿಸಲು ನಿರ್ಧಾರ ಮಾಡಿದ್ದೇನೆ.  3 ಬಾರಿ ಮಂತ್ರಿ ಸ್ಥಾನ ಅವಕಾಶ ನಿರಾಕರಿಸಿದ್ದಕ್ಕೆ ಕಾಂಗ್ರೆಸ್ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನನಗೆ ಅಪಾರ ಅಭಿಮಾನ ಇದೆ.  ಆದರೆ ಕಾಂಗ್ರೆಸ್’ನಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ  ಬಂದಿದ್ದರಿಂದ ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದೇನೆ ಎಂದಿದ್ದಾರೆ.  ಸದ್ಯದಲ್ಲೇ ಬಿಜೆಪಿ, 

ಮಾಲೀಕಯ್ಯ ಗುತ್ತೇದಾರ್  ಮನವೊಲಿಸಲು ಸ್ವತಃ ಸಿಎಂ ಸಿದ್ರಾಮಯ್ಯ ಮುಂದಾಗಿದ್ದಾರೆ.  ಕರೆ ಮಾಡಿ ಪಕ್ಷ ಬಿಡದಂತೆ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಮನವಿಗೂ  ಶಾಸಕ ಮಾಲೀಕಯ್ಯ ಗುತ್ತೇದಾರ ಸೊಪ್ಪು ಹಾಕಿಲ್ಲ.  ಹಿಂದುಳಿದ ವರ್ಗದ ವ್ಯಕ್ತಿಯ ಸಿಎಂ ಸ್ಥಾನಕ್ಕೆ ಧಕ್ಕೆ ತರಬಾರದೆಂದು ಸುಮ್ಮನಿದ್ದೆ.  ಪಕ್ಷದ ಹಿರಿಯ ನಾಯಕರು ನನ್ನನ್ನು ತುಳಿಯುತ್ತಲೇ ಇದ್ರೂ ನೀವು ತಲೆಕೆಡಿಸಿಕೊಂಡಿಲ್ಲ.  ನಿಮ್ಮ ಸಿಎಂ ಅವಧಿ ಮುಗಿದಿದೆ. ಈಗ ನನ್ನ ಭವಿಷ್ಯ ನೋಡಿಕೊಳ್ಳಲು ನನಗೆ ಬಿಡಿ ಸಿಎಂ ಸಿದ್ರಾಮಯ್ಯ ಗೆ ನೇರ ಖಡಕ್ ತಿರುಗೇಟು ನೀಡಿದ್ದಾರೆ ಮಾಲೀಕಯ್ಯ ಗುತ್ತೇದಾರ್.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!
KPTCL ಕೆಲಸ, ಶನಿವಾರ ಬೆಂಗಳೂರಲ್ಲಿ ಕರೆಂಟ್‌ ಇರಲ್ಲ..!