ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕ : ಮುಂದುವರಿದ ಬಿಗಿಪಟ್ಟು

Published : Sep 24, 2018, 09:37 AM IST
ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕ : ಮುಂದುವರಿದ ಬಿಗಿಪಟ್ಟು

ಸಾರಾಂಶ

ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರ ಮನವೊಲಿಸುವಲ್ಲಿ ಡಿ.ಕೆ. ಶಿವಕುಮಾರ್ ವಿಫಲವಾಗಿದೆ ಎನ್ನಲಾಗಿದ್ದು ಇದೀಗ ಎಂಟಿಬಿ ನಾಗರಾಜ್ ಮನವೊಲಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಹೊಸಕೋಟೆ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಶನಿವಾರ ತಡರಾತ್ರಿ ನಿವಾಸಕ್ಕೆ ವಾಪಸಾಗಿದ್ದು, ಸಚಿವ ಡಿ.ಕೆ. ಶಿವಕುಮಾರ್ ಎರಡು ಹಂತದಲ್ಲಿ ಮಾತುಕತೆ ನಡೆಸಿ ಮನವೊಲಿಸಲು ಪ್ರಯತ್ನಿಸಿದರೂ ಸಚಿವ ಸ್ಥಾನಕ್ಕಾಗಿ ಪಟ್ಟು ಮುಂದುವರೆಸಿದ್ದಾರೆ ಎನ್ನಲಾಗಿದೆ. 

ಹೀಗಾಗಿ ಎಂಟಿಬಿ ನಾಗರಾಜ್ ಮನವೊಲಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಸಮ್ಮಿಶ್ರ ಸರ್ಕಾರದ ಮೇಲಿನ ಅತೃಪ್ತಿಯಿಂದ ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದ್ದ ಎಂಟಿಬಿ ನಾಗರಾಜ್ ಶನಿವಾರ ತಡರಾತ್ರಿ ನಿವಾಸಕ್ಕೆ ವಾಪಸಾಗಿದ್ದರು. ಇದರ ಬೆನ್ನಲ್ಲೇ ಭಾನುವಾರ ಸಚಿವ ಶಿವಕುಮಾರ್ ಅವರು ದೊಡ್ಡನೆಕ್ಕುಂದಿಯ ಅವರ ನಿವಾಸಕ್ಕೆ ತೆರಳಿ ಉಪಾಹಾರ ನೆಪದಲ್ಲಿ ಒಂದೂವರೆ ತಾಸು ಚರ್ಚೆ ನಡೆಸಿದರು. ಆದರೆ, ಈ ವೇಳೆ ಎಂಟಿಬಿ ನಾಗರಾಜ್ ಮನವೊಲಿಕೆ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. 

ನಂತರ ಖುದ್ದು ಎಂಟಿಬಿ  ನಾಗರಾಜ್ ಅವರೇ ಸಂಜೆ ವೇಳೆ ಕುಮಾರಕೃಪಾ ಅತಿಥಿಗೃಹಕ್ಕೆ ಆಗಮಿಸಿ ಶಿವಕುಮಾರ್ ಅವರನ್ನು ಭೇಟಿ  ಮಾಡಿ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಸಚಿವ ಶಿವಕುಮಾರ್, ಪಕ್ಷದಲ್ಲಿ ಕೆಲವೊಮ್ಮೆ ಅಧಿಕಾರ ಕಾಯಿಸುತ್ತದೆ. ನಾನು ಸಹ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಏಳು ತಿಂಗಳು ಅಧಿಕಾರ ವಂಚಿತನಾಗಿದ್ದೆ. ಆದ ಮಾತ್ರಕ್ಕೆ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು