
ಬೆಂಗಳೂರು: ಸಚಿವ ಸಂಪುಟದಲ್ಲಿ ಹಿರಿಯರಿಗೆ ಸೂಕ್ತ ಅವಕಾಶ ಸಿಗದಿರುವ ಹಿನ್ನೆಲೆಯಲ್ಲಿ, ಅತೃಪ್ತ ಶಾಸಕರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಈ ವಾರದ ಕೊನೆಯಲ್ಲಿ ರಾಹುಲ್ ಗಾಂಧಿ ಭೇಟಿಗೆ ಶಾಸಕರ ಪ್ಲಾನ್ ಮಾಡಿದ್ದು, ಸಂಪುಟ ರಚನೆಯಲ್ಲಿ ಆಗಿರುವ ವ್ಯತ್ಯಾಸಗಳನ್ನು ಸರಿಪಡಿಸಲು ಆಗ್ರಹಿಸಲಿದ್ದಾರೆ.
ರಾಹುಲ್ ಗಾಂಧಿ ಮುಂದೆ ಈ ಕುರಿತು ಸಮಜಾಯಿಸಿ ಕೇಳಲು ಚಿಂತನೆ ನಡೆಸಿರುವ ಶಾಸಕರು, ಶನಿವಾರ ಇಲ್ಲವೇ ರವಿವಾರ ರಾಹುಲ್ ಭೇಟಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ರಾಹುಲ್ ಗಾಂಧಿ ಭೇಟಿಯ ಬಳಿಕ ಅತೃಪ್ತರು ಕಾರ್ಯತಂತ್ರ ನಿರ್ಧರಿಸಲಿದ್ದಾರೆನ್ನಲಾಗಿದೆ.
ರಾಹುಲ್ ಭೇಟಿಗೆ ಅತೃಪ್ತರು ಮುಂದಾಗ್ತಿದ್ದಂತೆ ಅತೃಪ್ತರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಹೈಕಮಾಂಡ್ ನಿಂದ ಸಂದೇಶ ಬಂದಿದೆ. ಕೂಡಲೇ , ಡಿಸಿಎಂ ಪರಮೇಶ್ವರ್ ಅತೃಪ್ತ ಶಾಸಕರ ಮುಂದೆ ಮಾತುಕತೆಯ ಪ್ರಸ್ತಾಪ ಮುಂದಿಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.