ಸಿದ್ದು ನ್ಯಾಮಗೌಡ ಪುತ್ರನಿಗೆ ಕೈ ಟಿಕೆಟ್

By Web DeskFirst Published Jul 22, 2018, 9:45 AM IST
Highlights

ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

ಬೆಂಗಳೂರು: ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

ಸಿದ್ದು ನ್ಯಾಮಗೌಡ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಹೀಗಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.

click me!