ಗುಜರಾತ್ ಶಾಸಕರ ಭದ್ರತೆ ಖಾತ್ರಿಪಡಿಸಲು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಮನವಿ

Published : Aug 02, 2017, 09:25 PM ISTUpdated : Apr 11, 2018, 12:57 PM IST
ಗುಜರಾತ್ ಶಾಸಕರ ಭದ್ರತೆ ಖಾತ್ರಿಪಡಿಸಲು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಮನವಿ

ಸಾರಾಂಶ

ರಾಜ್ಯಸಭಾ ಚುನಾವಣಾ ಹಿನ್ನಲೆಯಲ್ಲಿ ಗುಜರಾತ್ ಶಾಸಕರ ಭದ್ರತೆಯನ್ನು ಖಾತ್ರಿಪಡಿಸಿ ಎಂದು ಗುಜರಾತ್ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಕೇಳಿಕೊಂಡಿದೆ.

ನವದೆಹಲಿ (ಆ.02): ರಾಜ್ಯಸಭಾ ಚುನಾವಣಾ ಹಿನ್ನಲೆಯಲ್ಲಿ ಗುಜರಾತ್ ಶಾಸಕರ ಭದ್ರತೆಯನ್ನು ಖಾತ್ರಿಪಡಿಸಿ ಎಂದು ಗುಜರಾತ್ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಕೇಳಿಕೊಂಡಿದೆ.

ಇಂಧನ ಸಚಿಒವ ಡಿಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ ರೆಸಾರ್ಟ್’ನಲ್ಲಿ ತಂಗಿದ್ದ ಗುಜರಾತ್ ಶಾಸಕರನ್ನು ಕೂಡಾ ಕೇಂದ್ರೀಯ ಭದ್ರತಾ ಪಡೆಗಳು ಹೆದರಿಸುತ್ತಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಪಿಲ್ ಸಿಬಲ್, ರಾಜೀವ್ ಶುಕ್ಲಾ, ಮನೀಶ್ ತಿವಾರಿ, ರಣದೀಪ್ ಸರ್ಜೆವಾಲಾ ನೇತೃತ್ವದ ನಿಯೋಗವು ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಶಾಸಕರ ಭದ್ರತೆ ಬಗ್ಗೆ ಮಾತುಕತೆ ನಡೆಸಿತು.

ನಮ್ಮ ಶಾಸಕರ ಮೇಲೆ ಸುಳ್ಳು ಕೇಸ್ ಹಾಕಿ ಅವರನ್ನು ಬಂಧಿಸಲು ಪ್ರಯತ್ನಿಸಿ, ಆ.08 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮತ ಹಾಕದಂತೆ ತಡೆಯುವ ಸಾಧ್ಯತೆಯಿದೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಮನವಿ ಮಾಡಿಕೊಂಡಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!
Amur Falcon birds: ಭಾರತದಿಂದ ಜಿಂಬಾಬ್ವೆಗೆ ಕೇವಲ 6 ದಿನಗಳಲ್ಲಿ 6,100 ಕಿ.ಮೀ ಹಾರಿದ ಪುಟ್ಟ ಹಕ್ಕಿಗಳು!